‘ನಗರದ ಇತಿಹಾಸಕ್ಕೆ ಮೆರುಗು ನೀಡುವಂತೆ ಮೊದಲ ಬಾರಿಗೆ ವಿ.ವಿ.ಪುರ ಹಬ್ಬವನ್ನು ಆಚರಿಸಲಾಗುತ್ತಿದೆ.ಬೆಳ್ಳಿ ತೇರು ಉತ್ಸವ ನಡೆಯುತ್ತದೆ. ಪ್ರತಿವರ್ಷವೂ ಹಬ್ಬವನ್ನು ಅದ್ದೂರಿಯಾಗಿ ಆಚರಣೆ ಮಾಡುತ್ತೇವೆ. ಹಬ್ಬದಲ್ಲಿ ಎಲ್ಲಾ ಧರ್ಮೀಯರಿಗೂ ವ್ಯಾಪಾರ ವಹಿವಾಟಿಗೆ ಅವಕಾಶ ಕಲ್ಪಿಸಲಾಗುವುದು. ಯಾವುದೇ ವಿವಾದ ಇಲ್ಲದೆ ಮುಕ್ತವಾಗಿ ವ್ಯಾಪಾರ ಮಾಡಲು ಎಲ್ಲರಿಗೂ ಅವಕಾಶ ಕಲ್ಪಿಸಲಾಗುವುದು. ನಾನು ಸಂವಿಧಾನದ ಮೇಲೆ ಪ್ರಮಾಣ ಮಾಡಿ ಅಧಿಕಾರ ಸ್ವೀಕಾರ ಮಾಡಿದ್ದೇನೆ. ಸಂವಿಧಾನ ಎಲ್ಲರಿಗೂ ಹಕ್ಕು ನೀಡಿದೆ. ಹೀಗಾಗಿ, ಈ ಹಬ್ಬದಲ್ಲಿ ಜಾತಿ, ಧರ್ಮದ ಭೇದವಿಲ್ಲದೆ ಎಲ್ಲರೂ ಸೇರಿ ವಿಜೃಂಭಣೆಯಿಂದ ಹಬ್ಬ ಆಚರಣೆ ಮಾಡಬೇಕು’ ಎಂದು ತಿಳಿಸಿದರು.