<p><strong>ಬೆಂಗಳೂರು: </strong>ನಗರದಲ್ಲಿ ಸೋಮವಾರವೂ ಧಾರಾಕಾರವಾಗಿ ಮಳೆ ಸುರಿದಿದ್ದು, ಮೂರು ಕಡೆ ಗೋಡೆ ಕುಸಿದು ಆತಂಕ ಸೃಷ್ಟಿಯಾಗಿದೆ.</p>.<p>ಇಂದಿರಾನಗರದಲ್ಲಿ ಸೋಮವಾರ ಮಿಲಿಟರಿ ಕಾಂಪೌಂಡ್ ಕುಸಿದು 10ಕ್ಕೂ ಹೆಚ್ಚು ವಾಹನಗಳು ಜಖಂಗೊಂಡಿವೆ. ಬೆಳಗಿನ ಜಾವ ಗೋಡೆ ಕುಸಿದಿರುವುದರಿಂದ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಕಳೆದ ವರ್ಷವೂ ಇದೇ ಜಾಗದಲ್ಲಿ ಮಹಿಳೆ ಮೇಲೆ ಗೋಡೆ ಕುಸಿದು ಬಿದ್ದಿತ್ತು. ಆಗಾಗ ಈ ರೀತಿಯ ತೊಂದರೆ ಆಗುತ್ತಿದ್ದರೂ ಅಧಿಕಾರಿಗಳು ಕ್ರಮ ಕೈಗೊಂಡಿಲ್ಲ ಎಂದು ಸ್ಥಳೀಯರು ದೂರಿದ್ದಾರೆ.</p>.<p>ಶೇಷಾದ್ರಿಪುರದಿಂದ ಮೆಜೆಸ್ಟಿಕ್ಗೆ ತೆರಳುವ ಮುಖ್ಯ ರಸ್ತೆಯ ಪಕ್ಕದಲ್ಲಿ ದೊಡ್ಡ ಗೋಡೆಯೊಂದು ಕುಸಿದು ಆತಂಕ ಹೆಚ್ಚಿಸಿದೆ. ಪಕ್ಕದಲ್ಲೇ ರೈಲ್ವೆ ಮೇಲ್ಸೇತುವೆ ಹಾದು ಹೋಗಿದ್ದು, ಗೋಡೆಗೆ ಹೊಂದಿಕೊಂಡೇ ಇರುವ ಮನೆ ಕುಸಿಯುವ ಭಯದಲ್ಲಿ ನಿವಾಸಿಗಳಿದ್ದಾರೆ.</p>.<p>‘ಈ ಹಿಂದೆಯೂ ಮನೆಯ ಒಂದು ಮೂಲೆ ಕುಸಿದಿತ್ತು. ಈಗ ಮತ್ತೊಮ್ಮೆ ಗೋಡೆ ಕುಸಿದಿದೆ. ಸದ್ಯ ಮನೆಯಿಂದ ಖಾಲಿ ಮಾಡಿಸಿ ಅಧಿಕಾರಿಗಳು ತೆರಳಿದ್ದಾರೆ. ಮನೆ ಒಳಗೆ ಹೋಗದೆ ಹೊರಗೆ ನಿಂತಿದ್ದೇವೆ. ಎಲ್ಲಿಗೆ ಹೋಗಬೇಕು ಎಂಬುದೇ ತಿಳಿಯುತ್ತಿಲ್ಲ’ ಎಂದು ಮನೆಯ ಮಾಲೀಕರಾದ ವಿಜಯಮ್ಮ ಕಣ್ಣೀರಿಟ್ಟರು.</p>.<p>‘ಗೋಡೆ ಬಿದ್ದ ಸಂದರ್ಭದಲ್ಲಿ ಕೆಳಗಿನ ರಸ್ತೆಯಲ್ಲಿ ಯಾವುದೇ ವಾಹನ ಇರಲಿಲ್ಲ. ಹೀಗಾಗಿ, ಯಾವುದೇ ಹಾನಿಯಾಗಿಲ್ಲ. ಮೇಲ್ಭಾಗದಲ್ಲಿನ ನಾಲ್ಕು ಮನೆಗಳಲ್ಲಿನ ಜನರನ್ನು ಮುನ್ನೆಚ್ಚರಿಕೆ ಕ್ರಮವಾಗಿ ಸ್ಥಳಾಂತರ ಮಾಡಲಾಗಿದೆ’ ಎಂದು ಬಿಬಿಎಂಪಿ ಅಧಿಕಾರಿಗಳು ತಿಳಿಸಿದ್ದಾರೆ.</p>.<p>‘50 ವರ್ಷಗಳಷ್ಟು ಹಳೆಯದಾದ ಕಲ್ಲಿನ ಗೋಡೆ ಆಕಸ್ಮಿಕವಾಗಿ ಕುಸಿದಿದೆ. ರೈಲ್ವೆ ಮಾರ್ಗದ ಬಳಿ ಗಟ್ಟಿಯಾಗಿದ್ದು, ಯಾವುದೇ ತೊಂದರೆ ಇಲ್ಲ. ಬಿದ್ದಿರುವ ಗೋಡೆಯನ್ನು ತಾತ್ಕಾಲಿಕವಾಗಿ ಮರಳು ಮೂಟೆಗಳಿಂದ ಭದ್ರಪಡಿಸಲಾಗುತ್ತಿದೆ’ ಎಂದು ಪಶ್ಚಿಮ ವಲಯದ ಕಾರ್ಯಪಾಲಕ ಎಂಜಿನಿಯರ್ ಮಾರ್ಕಂಡೇಯ ಹೇಳಿದರು.</p>.<p>ಬೊಮ್ಮನಹಳ್ಳಿಯ ಕೋಡಿಚಿಕ್ಕನಹಳ್ಳಿ ಬಳಿ ಅಪಾರ್ಟ್ಮೆಂಟ್ ಪಕ್ಕದ ತಡೆಗೋಡೆ ಭಾನುವಾರ ರಾತ್ರಿ ಕುಸಿದಿದೆ. ಕಟ್ಟಡದ ಪಿಲ್ಲರ್ ಮೇಲೆಯೇ ಗೋಡೆ ಬಿದ್ದಿದ್ದು, ಸ್ಥಳಕ್ಕೆ ಬಿಬಿಎಂಪಿ ಎಂಜಿನಿಯರ್ಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು.</p>.<p class="Briefhead"><strong>ಎಡಬಿಡದೆ ಸುರಿದ ಮಳೆ</strong></p>.<p>ನಗರದೆಲ್ಲೆಡೆ ಬೆಳಿಗ್ಗೆಯಿಂದ ತುಂತುರು ಮಳೆ ಸುರಿಯುತ್ತಿತ್ತು. ಸಂಜೆ 6ರ ವೇಳೆಗೆ ಗುಡುಗು ಸಹಿತ ಜೋರಾದ ಮಳೆ ಸತತ ಸುರಿಯಿತು.</p>.<p>ಶಿವಾಜಿನಗರ, ಇಂದಿರಾನಗರ,ಬಸವೇಶ್ವರನಗರ, ರಾಜಾಜಿನಗರದ, ಹಲಸೂರು, ಮಲ್ಲೇಶ್ವರ, ವಿಜಯನಗರ, ಯಶವಂತಪುರ, ಪೀಣ್ಯ, ಮಹಾಲಕ್ಷ್ಮಿ ಲೇಔಟ್, ಸಂಪಂಗಿರಾಮನಗರ, ನಾಗರಬಾವಿ, ಕೆಂಗೇರಿ, ರಾಜರಾಜೇಶ್ವರಿನಗರ, ಅನ್ನಪೂರ್ಣೇಶ್ವರಿನಗರ, ಬನಶಂಕರಿ, ಆರ್.ಟಿ.ನಗರ, ಹೆಬ್ಬಾಳ ಹಾಗೂ ಸುತ್ತಮುತ್ತಲ ಪ್ರದೇಶದಲ್ಲಿ ಭಾರಿ ಮಳೆ ಸುರಿಯಿತು.</p>.<p>ಕೆಂಪೇಗೌಡ ಅಂತರ ರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಭಾರಿ ಮಳೆಯಿಂದ ರಸ್ತೆಯಲ್ಲಿ ಹೊಳೆಯಂತೆ ನೀರು ಹರಿಯಿತು. ಮುಂದಕ್ಕೆ ಹೋಗಲು ಸಾಧ್ಯವಾಗದೆ ಕಾರುಗಳು ಸಾಲುಗಟ್ಟಿ ನಿಂತಿದ್ದವು.</p>.<p><strong>ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಸುತ್ತಮುತ್ತ ಭಾರಿ ಮಳೆ</strong></p>.<p><strong>ದೇವನಹಳ್ಳಿ: </strong>ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಸುತ್ತಮುತ್ತಲು ಒಂದು ಗಂಟೆ ಕಾಲ ಸುರಿದ ಭಾರಿ ಮಳೆಯಿಂದಾಗಿ ಪ್ರಯಾಣಿಕರು ಪರದಾಡುವಂತಾಯಿತು. ವಿಮಾನ ನಿಲ್ದಾಣದ ಟರ್ಮಿನಲ್ಗಳಿಗೆ ನೀರು ನುಗ್ಗಿದ್ದರಿಂದ ವಾಹನ ಸಂಚಾರಕ್ಕೆ ಅಡ್ಡಿಯುಂಟಾಯಿತು.</p>.<p>ಟರ್ಮಿನಲ್ ಮುಂಭಾಗದಲ್ಲಿ ಸುಮಾರು ಎರಡು ಅಡಿಗೂ ಅಧಿಕ ನೀರು ನಿಂತಿದ್ದರಿಂದ ವಿವಿಧ ಕಡೆಗಳಿಂದ ಬರುವ ಪ್ರಯಾಣಿಕರು ಪರದಾಡುವ ಸ್ಥಿತಿ ಇತ್ತು. ಟರ್ಮಿನಲ್ ಮುಂಭಾಗದ ರಸ್ತೆಗಳು ಅಕ್ಷರಶಃ ಕೆರೆಯಂತಾಗಿತ್ತು.</p>.<p>ದೇವನಹಳ್ಳಿ ಬೈಪಾಸ್ ರಸ್ತೆಯಲ್ಲಿ ದಸರಾ ಅಂಗವಾಗಿ ಮಾರಾಟ ಮಾಡಲು ತಂದಿದ್ದ ಬೂದುಕುಂಬಳಕಾಯಿ ಸೇರಿದಂತೆ ತರಕಾರಿ ಮಳೆ ನೀರಿನಲ್ಲಿ ಕೊಚ್ಚಿ ಹೋಗುತ್ತಿದ್ದ ದೃಶ್ಯ ಕಂಡು ಬಂದಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ನಗರದಲ್ಲಿ ಸೋಮವಾರವೂ ಧಾರಾಕಾರವಾಗಿ ಮಳೆ ಸುರಿದಿದ್ದು, ಮೂರು ಕಡೆ ಗೋಡೆ ಕುಸಿದು ಆತಂಕ ಸೃಷ್ಟಿಯಾಗಿದೆ.</p>.<p>ಇಂದಿರಾನಗರದಲ್ಲಿ ಸೋಮವಾರ ಮಿಲಿಟರಿ ಕಾಂಪೌಂಡ್ ಕುಸಿದು 10ಕ್ಕೂ ಹೆಚ್ಚು ವಾಹನಗಳು ಜಖಂಗೊಂಡಿವೆ. ಬೆಳಗಿನ ಜಾವ ಗೋಡೆ ಕುಸಿದಿರುವುದರಿಂದ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಕಳೆದ ವರ್ಷವೂ ಇದೇ ಜಾಗದಲ್ಲಿ ಮಹಿಳೆ ಮೇಲೆ ಗೋಡೆ ಕುಸಿದು ಬಿದ್ದಿತ್ತು. ಆಗಾಗ ಈ ರೀತಿಯ ತೊಂದರೆ ಆಗುತ್ತಿದ್ದರೂ ಅಧಿಕಾರಿಗಳು ಕ್ರಮ ಕೈಗೊಂಡಿಲ್ಲ ಎಂದು ಸ್ಥಳೀಯರು ದೂರಿದ್ದಾರೆ.</p>.<p>ಶೇಷಾದ್ರಿಪುರದಿಂದ ಮೆಜೆಸ್ಟಿಕ್ಗೆ ತೆರಳುವ ಮುಖ್ಯ ರಸ್ತೆಯ ಪಕ್ಕದಲ್ಲಿ ದೊಡ್ಡ ಗೋಡೆಯೊಂದು ಕುಸಿದು ಆತಂಕ ಹೆಚ್ಚಿಸಿದೆ. ಪಕ್ಕದಲ್ಲೇ ರೈಲ್ವೆ ಮೇಲ್ಸೇತುವೆ ಹಾದು ಹೋಗಿದ್ದು, ಗೋಡೆಗೆ ಹೊಂದಿಕೊಂಡೇ ಇರುವ ಮನೆ ಕುಸಿಯುವ ಭಯದಲ್ಲಿ ನಿವಾಸಿಗಳಿದ್ದಾರೆ.</p>.<p>‘ಈ ಹಿಂದೆಯೂ ಮನೆಯ ಒಂದು ಮೂಲೆ ಕುಸಿದಿತ್ತು. ಈಗ ಮತ್ತೊಮ್ಮೆ ಗೋಡೆ ಕುಸಿದಿದೆ. ಸದ್ಯ ಮನೆಯಿಂದ ಖಾಲಿ ಮಾಡಿಸಿ ಅಧಿಕಾರಿಗಳು ತೆರಳಿದ್ದಾರೆ. ಮನೆ ಒಳಗೆ ಹೋಗದೆ ಹೊರಗೆ ನಿಂತಿದ್ದೇವೆ. ಎಲ್ಲಿಗೆ ಹೋಗಬೇಕು ಎಂಬುದೇ ತಿಳಿಯುತ್ತಿಲ್ಲ’ ಎಂದು ಮನೆಯ ಮಾಲೀಕರಾದ ವಿಜಯಮ್ಮ ಕಣ್ಣೀರಿಟ್ಟರು.</p>.<p>‘ಗೋಡೆ ಬಿದ್ದ ಸಂದರ್ಭದಲ್ಲಿ ಕೆಳಗಿನ ರಸ್ತೆಯಲ್ಲಿ ಯಾವುದೇ ವಾಹನ ಇರಲಿಲ್ಲ. ಹೀಗಾಗಿ, ಯಾವುದೇ ಹಾನಿಯಾಗಿಲ್ಲ. ಮೇಲ್ಭಾಗದಲ್ಲಿನ ನಾಲ್ಕು ಮನೆಗಳಲ್ಲಿನ ಜನರನ್ನು ಮುನ್ನೆಚ್ಚರಿಕೆ ಕ್ರಮವಾಗಿ ಸ್ಥಳಾಂತರ ಮಾಡಲಾಗಿದೆ’ ಎಂದು ಬಿಬಿಎಂಪಿ ಅಧಿಕಾರಿಗಳು ತಿಳಿಸಿದ್ದಾರೆ.</p>.<p>‘50 ವರ್ಷಗಳಷ್ಟು ಹಳೆಯದಾದ ಕಲ್ಲಿನ ಗೋಡೆ ಆಕಸ್ಮಿಕವಾಗಿ ಕುಸಿದಿದೆ. ರೈಲ್ವೆ ಮಾರ್ಗದ ಬಳಿ ಗಟ್ಟಿಯಾಗಿದ್ದು, ಯಾವುದೇ ತೊಂದರೆ ಇಲ್ಲ. ಬಿದ್ದಿರುವ ಗೋಡೆಯನ್ನು ತಾತ್ಕಾಲಿಕವಾಗಿ ಮರಳು ಮೂಟೆಗಳಿಂದ ಭದ್ರಪಡಿಸಲಾಗುತ್ತಿದೆ’ ಎಂದು ಪಶ್ಚಿಮ ವಲಯದ ಕಾರ್ಯಪಾಲಕ ಎಂಜಿನಿಯರ್ ಮಾರ್ಕಂಡೇಯ ಹೇಳಿದರು.</p>.<p>ಬೊಮ್ಮನಹಳ್ಳಿಯ ಕೋಡಿಚಿಕ್ಕನಹಳ್ಳಿ ಬಳಿ ಅಪಾರ್ಟ್ಮೆಂಟ್ ಪಕ್ಕದ ತಡೆಗೋಡೆ ಭಾನುವಾರ ರಾತ್ರಿ ಕುಸಿದಿದೆ. ಕಟ್ಟಡದ ಪಿಲ್ಲರ್ ಮೇಲೆಯೇ ಗೋಡೆ ಬಿದ್ದಿದ್ದು, ಸ್ಥಳಕ್ಕೆ ಬಿಬಿಎಂಪಿ ಎಂಜಿನಿಯರ್ಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು.</p>.<p class="Briefhead"><strong>ಎಡಬಿಡದೆ ಸುರಿದ ಮಳೆ</strong></p>.<p>ನಗರದೆಲ್ಲೆಡೆ ಬೆಳಿಗ್ಗೆಯಿಂದ ತುಂತುರು ಮಳೆ ಸುರಿಯುತ್ತಿತ್ತು. ಸಂಜೆ 6ರ ವೇಳೆಗೆ ಗುಡುಗು ಸಹಿತ ಜೋರಾದ ಮಳೆ ಸತತ ಸುರಿಯಿತು.</p>.<p>ಶಿವಾಜಿನಗರ, ಇಂದಿರಾನಗರ,ಬಸವೇಶ್ವರನಗರ, ರಾಜಾಜಿನಗರದ, ಹಲಸೂರು, ಮಲ್ಲೇಶ್ವರ, ವಿಜಯನಗರ, ಯಶವಂತಪುರ, ಪೀಣ್ಯ, ಮಹಾಲಕ್ಷ್ಮಿ ಲೇಔಟ್, ಸಂಪಂಗಿರಾಮನಗರ, ನಾಗರಬಾವಿ, ಕೆಂಗೇರಿ, ರಾಜರಾಜೇಶ್ವರಿನಗರ, ಅನ್ನಪೂರ್ಣೇಶ್ವರಿನಗರ, ಬನಶಂಕರಿ, ಆರ್.ಟಿ.ನಗರ, ಹೆಬ್ಬಾಳ ಹಾಗೂ ಸುತ್ತಮುತ್ತಲ ಪ್ರದೇಶದಲ್ಲಿ ಭಾರಿ ಮಳೆ ಸುರಿಯಿತು.</p>.<p>ಕೆಂಪೇಗೌಡ ಅಂತರ ರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಭಾರಿ ಮಳೆಯಿಂದ ರಸ್ತೆಯಲ್ಲಿ ಹೊಳೆಯಂತೆ ನೀರು ಹರಿಯಿತು. ಮುಂದಕ್ಕೆ ಹೋಗಲು ಸಾಧ್ಯವಾಗದೆ ಕಾರುಗಳು ಸಾಲುಗಟ್ಟಿ ನಿಂತಿದ್ದವು.</p>.<p><strong>ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಸುತ್ತಮುತ್ತ ಭಾರಿ ಮಳೆ</strong></p>.<p><strong>ದೇವನಹಳ್ಳಿ: </strong>ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಸುತ್ತಮುತ್ತಲು ಒಂದು ಗಂಟೆ ಕಾಲ ಸುರಿದ ಭಾರಿ ಮಳೆಯಿಂದಾಗಿ ಪ್ರಯಾಣಿಕರು ಪರದಾಡುವಂತಾಯಿತು. ವಿಮಾನ ನಿಲ್ದಾಣದ ಟರ್ಮಿನಲ್ಗಳಿಗೆ ನೀರು ನುಗ್ಗಿದ್ದರಿಂದ ವಾಹನ ಸಂಚಾರಕ್ಕೆ ಅಡ್ಡಿಯುಂಟಾಯಿತು.</p>.<p>ಟರ್ಮಿನಲ್ ಮುಂಭಾಗದಲ್ಲಿ ಸುಮಾರು ಎರಡು ಅಡಿಗೂ ಅಧಿಕ ನೀರು ನಿಂತಿದ್ದರಿಂದ ವಿವಿಧ ಕಡೆಗಳಿಂದ ಬರುವ ಪ್ರಯಾಣಿಕರು ಪರದಾಡುವ ಸ್ಥಿತಿ ಇತ್ತು. ಟರ್ಮಿನಲ್ ಮುಂಭಾಗದ ರಸ್ತೆಗಳು ಅಕ್ಷರಶಃ ಕೆರೆಯಂತಾಗಿತ್ತು.</p>.<p>ದೇವನಹಳ್ಳಿ ಬೈಪಾಸ್ ರಸ್ತೆಯಲ್ಲಿ ದಸರಾ ಅಂಗವಾಗಿ ಮಾರಾಟ ಮಾಡಲು ತಂದಿದ್ದ ಬೂದುಕುಂಬಳಕಾಯಿ ಸೇರಿದಂತೆ ತರಕಾರಿ ಮಳೆ ನೀರಿನಲ್ಲಿ ಕೊಚ್ಚಿ ಹೋಗುತ್ತಿದ್ದ ದೃಶ್ಯ ಕಂಡು ಬಂದಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>