<p><strong>ಬೆಂಗಳೂರು:</strong> ಮಹಾಲಕ್ಷ್ಮಿ ಲೇಔಟ್ ಠಾಣೆ ವ್ಯಾಪ್ತಿಯಲ್ಲಿ ಶುಕ್ರವಾರ ಬೆಳಿಗ್ಗೆ ಗೋಡೆ ಸಮೇತ ಶೆಡ್ ಕುಸಿದಿದ್ದು, ಬಿಹಾರದ ಕಾರ್ಮಿಕ ಪೂರನ್ ಪೂಜಾರಿ (19) ಎಂಬುವರು ಮೃತಪಟ್ಟಿದ್ದಾರೆ.</p>.<p>‘ನಗರದಲ್ಲಿ ಗುರುವಾರ ರಾತ್ರಿ ಜೋರು ಮಳೆ ಆಗಿದೆ. ನೀರಿನಿಂದ ನೆನೆದು ಗೋಡೆ ಕುಸಿದಿದ್ದರಿಂದ ಈ ಅವಘಡ ಸಂಭವಿಸಿದೆ’ ಎಂದು ಸ್ಥಳೀಯರು ಹೇಳಿದರು.</p>.<p>ಇಸ್ಕಾನ್ ದೇವಸ್ಥಾನದ ಸಮೀಪದಲ್ಲಿ ಸಿಕಾನ್ ಕಂಪನಿ ವತಿಯಿಂದ ಕಟ್ಟಡ ನಿರ್ಮಾಣ ಕೆಲಸ ನಡೆಯುತ್ತಿದೆ.<br />ಕೆಲಸಕ್ಕೆ ಬಂದಿದ್ದ ಕಾರ್ಮಿಕರಿಗೆ ತಾತ್ಕಾಲಿಕವಾಗಿ ಶೆಡ್ ನಿರ್ಮಿಸಲಾಗಿತ್ತು. ಶೆಡ್ಗೆ ಹೊಂದಿಕೊಂಡು ಹಳೇ ಗೋಡೆ ಇತ್ತು.</p>.<p>ಬೆಳಿಗ್ಗೆ 5.30ರ ಸುಮಾರಿಗೆ ಏಕಾಏಕಿ ಗೋಡೆ ಕುಸಿದು ಶೆಡ್ ಮೇಲೆ ಬಿದ್ದಿತ್ತು. ಶೆಡ್ ಸಹ<br />ನೆಲಕ್ಕುರುಳಿತ್ತು. ಶೆಡ್ನಲ್ಲಿ ಮಲಗಿದ್ದ ಪೂರನ್ ಮೇಲೆಯೇ ಇಟ್ಟಿಗೆಗಳು ಬಿದ್ದಿದ್ದವು. ಅದರಿಂದ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅವರ ಜೊತೆ ಶೆಡ್ನಲ್ಲಿ ಮಲಗಿದ್ದ ಭವಾನಿ ಸಿಂಗ್ (21) ಹಾಗೂ ಮಿಥುನ್ (22) ಎಂಬುವರು ತೀವ್ರವಾಗಿ ಗಾಯಗೊಂಡಿದ್ದಾರೆ. ಅವರನ್ನು ಕೆ.ಸಿ.ಜನರಲ್ ಆಸ್ಪತ್ರೆಗೆ ದಾಖಲಿಸಲಾಗಿದೆ.</p>.<p class="Subhead"><strong>ಮಾಲೀಕರ ವಿರುದ್ಧ ಪ್ರಕರಣ:</strong> ‘ಪೂರನ್ ಹಾಗೂ ಸ್ನೇಹಿತರು, ಕೆಲಸ ಹುಡುಕಿಕೊಂಡು ನಗರಕ್ಕೆ ಬಂದಿದ್ದರು. ಕಟ್ಟಡ ನಿರ್ಮಾಣದಲ್ಲಿ ಕಾರ್ಮಿಕರಾಗಿ ಕೆಲಸಕ್ಕೆ ಸೇರಿದ್ದರು. ನಿರ್ಮಾಣ ಹಂತದ ಕಟ್ಟಡದ ಸಮೀಪದಲ್ಲೇ ತಾತ್ಕಾಲಿಕವಾಗಿ ಶೆಡ್ ನಿರ್ಮಿಸಲಾಗಿತ್ತು. ಅಲ್ಲಿಯೇ ಸ್ನೇಹಿತರು ನೆಲೆಸಿದ್ದರು’ ಎಂದು ಪೊಲೀಸರು ಹೇಳಿದರು.</p>.<p>‘ಪೂರನ್ ಮೃತದೇಹವನ್ನು ಆಸ್ಪತ್ರೆಯಲ್ಲಿ ಇರಿಸಲಾಗಿದ್ದು, ಬಿಹಾರದಲ್ಲಿರುವ ಅವರ ಸಂಬಂಧಿಕರಿಗೆ ಮಾಹಿತಿ ನೀಡಲಾಗಿದೆ. ಅವರು ನಗರಕ್ಕೆ ಬಂದ ನಂತರ, ಮರಣೋತ್ತರ ಪರೀಕ್ಷೆ ನಡೆಸಲಾಗುವುದು. ಘಟನೆ ಸಂಬಂಧ ಕಟ್ಟಡದ ಮಾಲೀಕರು ಹಾಗೂ<br />ಇತರರ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ’ ಎಂದೂ ಅವರು ತಿಳಿಸಿದರು.</p>.<p>‘ಕುಸಿದಿರುವ ಗೋಡೆಯು ಹಳೆಯದ್ದಾಗಿತ್ತು. ಬೀಳುವ ಹಂತದಲ್ಲಿತ್ತು. ಇಷ್ಟಾದರೂ ಮಾಲೀಕರು, ಅದೇ ಸ್ಥಳದಲ್ಲೇ ತಾತ್ಕಾಲಿಕ ಶೆಡ್<br />ನಿರ್ಮಿಸಿಕೊಟ್ಟಿದ್ದಾರೆ’ ಎಂದೂ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಮಹಾಲಕ್ಷ್ಮಿ ಲೇಔಟ್ ಠಾಣೆ ವ್ಯಾಪ್ತಿಯಲ್ಲಿ ಶುಕ್ರವಾರ ಬೆಳಿಗ್ಗೆ ಗೋಡೆ ಸಮೇತ ಶೆಡ್ ಕುಸಿದಿದ್ದು, ಬಿಹಾರದ ಕಾರ್ಮಿಕ ಪೂರನ್ ಪೂಜಾರಿ (19) ಎಂಬುವರು ಮೃತಪಟ್ಟಿದ್ದಾರೆ.</p>.<p>‘ನಗರದಲ್ಲಿ ಗುರುವಾರ ರಾತ್ರಿ ಜೋರು ಮಳೆ ಆಗಿದೆ. ನೀರಿನಿಂದ ನೆನೆದು ಗೋಡೆ ಕುಸಿದಿದ್ದರಿಂದ ಈ ಅವಘಡ ಸಂಭವಿಸಿದೆ’ ಎಂದು ಸ್ಥಳೀಯರು ಹೇಳಿದರು.</p>.<p>ಇಸ್ಕಾನ್ ದೇವಸ್ಥಾನದ ಸಮೀಪದಲ್ಲಿ ಸಿಕಾನ್ ಕಂಪನಿ ವತಿಯಿಂದ ಕಟ್ಟಡ ನಿರ್ಮಾಣ ಕೆಲಸ ನಡೆಯುತ್ತಿದೆ.<br />ಕೆಲಸಕ್ಕೆ ಬಂದಿದ್ದ ಕಾರ್ಮಿಕರಿಗೆ ತಾತ್ಕಾಲಿಕವಾಗಿ ಶೆಡ್ ನಿರ್ಮಿಸಲಾಗಿತ್ತು. ಶೆಡ್ಗೆ ಹೊಂದಿಕೊಂಡು ಹಳೇ ಗೋಡೆ ಇತ್ತು.</p>.<p>ಬೆಳಿಗ್ಗೆ 5.30ರ ಸುಮಾರಿಗೆ ಏಕಾಏಕಿ ಗೋಡೆ ಕುಸಿದು ಶೆಡ್ ಮೇಲೆ ಬಿದ್ದಿತ್ತು. ಶೆಡ್ ಸಹ<br />ನೆಲಕ್ಕುರುಳಿತ್ತು. ಶೆಡ್ನಲ್ಲಿ ಮಲಗಿದ್ದ ಪೂರನ್ ಮೇಲೆಯೇ ಇಟ್ಟಿಗೆಗಳು ಬಿದ್ದಿದ್ದವು. ಅದರಿಂದ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅವರ ಜೊತೆ ಶೆಡ್ನಲ್ಲಿ ಮಲಗಿದ್ದ ಭವಾನಿ ಸಿಂಗ್ (21) ಹಾಗೂ ಮಿಥುನ್ (22) ಎಂಬುವರು ತೀವ್ರವಾಗಿ ಗಾಯಗೊಂಡಿದ್ದಾರೆ. ಅವರನ್ನು ಕೆ.ಸಿ.ಜನರಲ್ ಆಸ್ಪತ್ರೆಗೆ ದಾಖಲಿಸಲಾಗಿದೆ.</p>.<p class="Subhead"><strong>ಮಾಲೀಕರ ವಿರುದ್ಧ ಪ್ರಕರಣ:</strong> ‘ಪೂರನ್ ಹಾಗೂ ಸ್ನೇಹಿತರು, ಕೆಲಸ ಹುಡುಕಿಕೊಂಡು ನಗರಕ್ಕೆ ಬಂದಿದ್ದರು. ಕಟ್ಟಡ ನಿರ್ಮಾಣದಲ್ಲಿ ಕಾರ್ಮಿಕರಾಗಿ ಕೆಲಸಕ್ಕೆ ಸೇರಿದ್ದರು. ನಿರ್ಮಾಣ ಹಂತದ ಕಟ್ಟಡದ ಸಮೀಪದಲ್ಲೇ ತಾತ್ಕಾಲಿಕವಾಗಿ ಶೆಡ್ ನಿರ್ಮಿಸಲಾಗಿತ್ತು. ಅಲ್ಲಿಯೇ ಸ್ನೇಹಿತರು ನೆಲೆಸಿದ್ದರು’ ಎಂದು ಪೊಲೀಸರು ಹೇಳಿದರು.</p>.<p>‘ಪೂರನ್ ಮೃತದೇಹವನ್ನು ಆಸ್ಪತ್ರೆಯಲ್ಲಿ ಇರಿಸಲಾಗಿದ್ದು, ಬಿಹಾರದಲ್ಲಿರುವ ಅವರ ಸಂಬಂಧಿಕರಿಗೆ ಮಾಹಿತಿ ನೀಡಲಾಗಿದೆ. ಅವರು ನಗರಕ್ಕೆ ಬಂದ ನಂತರ, ಮರಣೋತ್ತರ ಪರೀಕ್ಷೆ ನಡೆಸಲಾಗುವುದು. ಘಟನೆ ಸಂಬಂಧ ಕಟ್ಟಡದ ಮಾಲೀಕರು ಹಾಗೂ<br />ಇತರರ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ’ ಎಂದೂ ಅವರು ತಿಳಿಸಿದರು.</p>.<p>‘ಕುಸಿದಿರುವ ಗೋಡೆಯು ಹಳೆಯದ್ದಾಗಿತ್ತು. ಬೀಳುವ ಹಂತದಲ್ಲಿತ್ತು. ಇಷ್ಟಾದರೂ ಮಾಲೀಕರು, ಅದೇ ಸ್ಥಳದಲ್ಲೇ ತಾತ್ಕಾಲಿಕ ಶೆಡ್<br />ನಿರ್ಮಿಸಿಕೊಟ್ಟಿದ್ದಾರೆ’ ಎಂದೂ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>