‘ವಿಧಾನಸಭಾ ವ್ಯಾಪ್ತಿಯೊಳಗೆ ವಾರ್ಡ್ಗಳು ಬರುವಂತೆ ನೋಡಿಕೊಂಡು ವಾರ್ಡ್ಗಳ ಸಂಖ್ಯೆ ಹೆಚ್ಚಿಸುವ ಸಂಬಂಧ ಪ್ರಮುಖ ಬದಲಾವಣೆಯನ್ನು ರಾಜ್ಯ ಸರ್ಕಾರ ಕೈಗೊಂಡಿದೆ. ದೀರ್ಘಕಾಲದಿಂದ ಬಾಕಿ ಉಳಿದಿರುವ ಈ ವಿಷಯವನ್ನು ಪರಿಹರಿಸಲು ಕೆಎಂಸಿ ಕಾಯ್ದೆಗೆ ತಿದ್ದುಪಡಿ ತರಲಾಗಿದೆ. ಇದನ್ನು ಗಮನದಲ್ಲಿ ಇಟ್ಟುಕೊಂಡು ಮುಂದುವರಿಯುವಂತೆ ಆಯೋಗಕ್ಕೂ ಮನವಿ ಮಾಡಲಾಗಿದೆ’ ಎಂದು ಅಡ್ವೊಕೇಟ್ ಜನರಲ್ ಪ್ರಭುಲಿಂಗ ಕೆ. ನಾವಡಗಿ ಅವರು ಈ ಹಿಂದಿನ ವಿಚಾರಣೆ ವೇಳೆ ವಿವರಣೆ ಸಲ್ಲಿಸಿದ್ದರು.