<p><strong>ಬೆಂಗಳೂರು: </strong>ನಗರದಲ್ಲಿ ಡಾ. ಶಿವರಾಮ ಕಾರಂತ ಬಡಾವಣೆ ರಚಿಸುವ ಪ್ರಕ್ರಿಯೆ ಚಾಲ್ತಿಯಲ್ಲಿದೆ. ಆದರೆ, ಈಗಾಗಲೇ ಈ ಪ್ರದೇಶದಲ್ಲಿ ಅನಧಿಕೃತ ಕಟ್ಟಡ ನಿರ್ಮಿಸಿ, ಮಾರಾಟ ಮಾಡುತ್ತಿರುವುದು ಗಮನಕ್ಕೆ ಬಂದಿದೆ. ಸಾರ್ವಜನಿಕರು ಈ ಪ್ರದೇಶದಲ್ಲಿ ಜಮೀನು ಅಥವಾ ನಿವೇಶನ ಖರೀದಿಸುವಾಗ ಎಚ್ಚರ ವಹಿಸಬೇಕು ಎಂದು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ಮನವಿ ಮಾಡಿದೆ.</p>.<p>ಈ ಅಧಿಸೂಚಿತ ಪ್ರದೇಶಗಳಲ್ಲಿ ಅನಧಿಕೃತವಾಗಿ ಕಟ್ಟಡ ನಿರ್ಮಿಸಿದ್ದಲ್ಲಿ, ಸುಪ್ರೀಂ ಕೋರ್ಟ್ ಆದೇಶದ ಅನುಸಾರ ಕಟ್ಟಡ ನೆಲಸಮಗೊಳಿಸಲಾಗುವುದು ಎಂದು ಹೇಳಿರುವ ಪ್ರಾಧಿಕಾರವು, ಅನಧಿಕೃತ ಕಟ್ಟಡಗಳು ನಿರ್ಮಾಣವಾಗುತ್ತಿರುವ ಬಗ್ಗೆ ಗಮನಕ್ಕೆ ಬಂದರೆ ಕೂಡಲೇ ಪ್ರಾಧಿಕಾರದ ಆಯುಕ್ತರು ಮತ್ತು ಜಾಗೃತ ದಳಕ್ಕೆ ದೂರು ನೀಡುವಂತೆ ನಾಗರಿಕರನ್ನು ಕೋರಿದೆ.</p>.<p>‘ಈ ಪ್ರದೇಶದಲ್ಲಿ ನಿವೇಶನ ಅಥವಾ ಜಮೀನು ಖರೀದಿಸುವಾಗ ಸಾರ್ವಜನಿಕರು ಪ್ರಾಧಿಕಾರವನ್ನು ಸಂಪರ್ಕಿಸಬೇಕು. ಅನಧಿಕೃತ ಕಟ್ಟಡಗಳ ಬಗ್ಗೆ ದೂರು ನೀಡಿದವರ ಗೋಪ್ಯತೆಯನ್ನು ಕಾಪಾಡಲಾಗುವುದು’ ಎಂದು ಬಿಡಿಎ ಪ್ರಕಟಣೆಯಲ್ಲಿ ಹೇಳಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ನಗರದಲ್ಲಿ ಡಾ. ಶಿವರಾಮ ಕಾರಂತ ಬಡಾವಣೆ ರಚಿಸುವ ಪ್ರಕ್ರಿಯೆ ಚಾಲ್ತಿಯಲ್ಲಿದೆ. ಆದರೆ, ಈಗಾಗಲೇ ಈ ಪ್ರದೇಶದಲ್ಲಿ ಅನಧಿಕೃತ ಕಟ್ಟಡ ನಿರ್ಮಿಸಿ, ಮಾರಾಟ ಮಾಡುತ್ತಿರುವುದು ಗಮನಕ್ಕೆ ಬಂದಿದೆ. ಸಾರ್ವಜನಿಕರು ಈ ಪ್ರದೇಶದಲ್ಲಿ ಜಮೀನು ಅಥವಾ ನಿವೇಶನ ಖರೀದಿಸುವಾಗ ಎಚ್ಚರ ವಹಿಸಬೇಕು ಎಂದು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ಮನವಿ ಮಾಡಿದೆ.</p>.<p>ಈ ಅಧಿಸೂಚಿತ ಪ್ರದೇಶಗಳಲ್ಲಿ ಅನಧಿಕೃತವಾಗಿ ಕಟ್ಟಡ ನಿರ್ಮಿಸಿದ್ದಲ್ಲಿ, ಸುಪ್ರೀಂ ಕೋರ್ಟ್ ಆದೇಶದ ಅನುಸಾರ ಕಟ್ಟಡ ನೆಲಸಮಗೊಳಿಸಲಾಗುವುದು ಎಂದು ಹೇಳಿರುವ ಪ್ರಾಧಿಕಾರವು, ಅನಧಿಕೃತ ಕಟ್ಟಡಗಳು ನಿರ್ಮಾಣವಾಗುತ್ತಿರುವ ಬಗ್ಗೆ ಗಮನಕ್ಕೆ ಬಂದರೆ ಕೂಡಲೇ ಪ್ರಾಧಿಕಾರದ ಆಯುಕ್ತರು ಮತ್ತು ಜಾಗೃತ ದಳಕ್ಕೆ ದೂರು ನೀಡುವಂತೆ ನಾಗರಿಕರನ್ನು ಕೋರಿದೆ.</p>.<p>‘ಈ ಪ್ರದೇಶದಲ್ಲಿ ನಿವೇಶನ ಅಥವಾ ಜಮೀನು ಖರೀದಿಸುವಾಗ ಸಾರ್ವಜನಿಕರು ಪ್ರಾಧಿಕಾರವನ್ನು ಸಂಪರ್ಕಿಸಬೇಕು. ಅನಧಿಕೃತ ಕಟ್ಟಡಗಳ ಬಗ್ಗೆ ದೂರು ನೀಡಿದವರ ಗೋಪ್ಯತೆಯನ್ನು ಕಾಪಾಡಲಾಗುವುದು’ ಎಂದು ಬಿಡಿಎ ಪ್ರಕಟಣೆಯಲ್ಲಿ ಹೇಳಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>