<p><strong>ಬೆಂಗಳೂರು: </strong>ಕೋವಿಡ್ ಪೀಡಿತರ ಚಿಕಿತ್ಸೆಗೆ ಬಳಸುವ ‘ರೆಮ್ಡಿಸಿವಿರ್’ ಚುಚ್ಚುಮದ್ದು ಹಾಗೂ ವೈದ್ಯಕೀಯ ಆಮ್ಲಜನಕದ ಅವಶ್ಯಕತೆ ಮತ್ತು ಲಭ್ಯತೆಯ ಕುರಿತು ಮಾಹಿತಿ ಸಂಗ್ರಹಿಸಿ ಒದಗಿಸಲು ಕರ್ನಾಟಕ ಔಷಧ ನಿಯಂತ್ರಣ ಇಲಾಖೆಯು ‘ವಾರ್ ರೂಂ’ ಆರಂಭಿಸಿದೆ.</p>.<p>‘ಕೊರೊನಾ ಎರಡನೇ ಅಲೆ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಕೋವಿಡ್ ಪ್ರಕರಣಗಳು ಏರುಗತಿಯಲ್ಲಿ ಸಾಗಿವೆ. ಇಂತಹ ಸಂದಿಗ್ಧ ಪರಿಸ್ಥಿತಿಯಲ್ಲಿ ‘ರೆಮ್ಡಿಸಿವಿರ್’ ಚುಚ್ಚುಮದ್ದು ಹಾಗೂ ವೈದ್ಯಕೀಯ ಆಮ್ಲಜನಕದ ಅವಶ್ಯಕತೆ ಹೆಚ್ಚಿದೆ. ಇವುಗಳನ್ನು ಸಕಾಲದಲ್ಲಿ ಒದಗಿಸುವ ಮೂಲಕ ಕೋವಿಡ್ ರೋಗಿಗಳ ಚಿಕಿತ್ಸೆಗೆ ನೆರವಾಗಬೇಕಿದೆ. ಈ ಉದ್ದೇಶದಿಂದ ಇಲಾಖೆಯ ಕೇಂದ್ರ ಕಚೇರಿಯಲ್ಲಿ ‘ವಾರ್ ರೂಂ’ ಆರಂಭಿಸಲಾಗಿದೆ. ಇಲಾಖೆಯ ಅಧಿಕಾರಿ ಹಾಗೂ ನೌಕರರನ್ನು ಮೂರು ತಂಡಗಳನ್ನಾಗಿ ವಿಭಾಗಿಸಲಾಗಿದೆ. ಇವರು ಪಾಳಿ ಮಾದರಿಯಲ್ಲಿ ಕೆಲಸ ಮಾಡಲಿದ್ದಾರೆ’ ಎಂದು ಇಲಾಖೆಯ ಪ್ರಕಟಣೆ ತಿಳಿಸಿದೆ.</p>.<p>‘ಮೊದಲನೇ ಪಾಳಿಯವರು ಬೆಳಿಗ್ಗೆ 6ರಿಂದ ಮಧ್ಯಾಹ್ನ 2, ಎರಡನೇ ಪಾಳಿಯವರು ಮಧ್ಯಾಹ್ನ 2ರಿಂದ ರಾತ್ರಿ 10 ಹಾಗೂ ಮೂರನೇ ಪಾಳಿಯವರು ರಾತ್ರಿ 10ರಿಂದ ಮರುದಿನ ಬೆಳಿಗ್ಗೆ 6ರವರೆಗೆ ಕಾರ್ಯನಿರ್ವಹಿಸಲಿದ್ದಾರೆ. ಇದು ಒಂದು ತಿಂಗಳು ಅಥವಾ ಮುಂದಿನ ಆದೇಶದವರೆಗೆ ಜಾರಿಯಲ್ಲಿರುತ್ತದೆ’ ಎಂದೂ ಹೇಳಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ಕೋವಿಡ್ ಪೀಡಿತರ ಚಿಕಿತ್ಸೆಗೆ ಬಳಸುವ ‘ರೆಮ್ಡಿಸಿವಿರ್’ ಚುಚ್ಚುಮದ್ದು ಹಾಗೂ ವೈದ್ಯಕೀಯ ಆಮ್ಲಜನಕದ ಅವಶ್ಯಕತೆ ಮತ್ತು ಲಭ್ಯತೆಯ ಕುರಿತು ಮಾಹಿತಿ ಸಂಗ್ರಹಿಸಿ ಒದಗಿಸಲು ಕರ್ನಾಟಕ ಔಷಧ ನಿಯಂತ್ರಣ ಇಲಾಖೆಯು ‘ವಾರ್ ರೂಂ’ ಆರಂಭಿಸಿದೆ.</p>.<p>‘ಕೊರೊನಾ ಎರಡನೇ ಅಲೆ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಕೋವಿಡ್ ಪ್ರಕರಣಗಳು ಏರುಗತಿಯಲ್ಲಿ ಸಾಗಿವೆ. ಇಂತಹ ಸಂದಿಗ್ಧ ಪರಿಸ್ಥಿತಿಯಲ್ಲಿ ‘ರೆಮ್ಡಿಸಿವಿರ್’ ಚುಚ್ಚುಮದ್ದು ಹಾಗೂ ವೈದ್ಯಕೀಯ ಆಮ್ಲಜನಕದ ಅವಶ್ಯಕತೆ ಹೆಚ್ಚಿದೆ. ಇವುಗಳನ್ನು ಸಕಾಲದಲ್ಲಿ ಒದಗಿಸುವ ಮೂಲಕ ಕೋವಿಡ್ ರೋಗಿಗಳ ಚಿಕಿತ್ಸೆಗೆ ನೆರವಾಗಬೇಕಿದೆ. ಈ ಉದ್ದೇಶದಿಂದ ಇಲಾಖೆಯ ಕೇಂದ್ರ ಕಚೇರಿಯಲ್ಲಿ ‘ವಾರ್ ರೂಂ’ ಆರಂಭಿಸಲಾಗಿದೆ. ಇಲಾಖೆಯ ಅಧಿಕಾರಿ ಹಾಗೂ ನೌಕರರನ್ನು ಮೂರು ತಂಡಗಳನ್ನಾಗಿ ವಿಭಾಗಿಸಲಾಗಿದೆ. ಇವರು ಪಾಳಿ ಮಾದರಿಯಲ್ಲಿ ಕೆಲಸ ಮಾಡಲಿದ್ದಾರೆ’ ಎಂದು ಇಲಾಖೆಯ ಪ್ರಕಟಣೆ ತಿಳಿಸಿದೆ.</p>.<p>‘ಮೊದಲನೇ ಪಾಳಿಯವರು ಬೆಳಿಗ್ಗೆ 6ರಿಂದ ಮಧ್ಯಾಹ್ನ 2, ಎರಡನೇ ಪಾಳಿಯವರು ಮಧ್ಯಾಹ್ನ 2ರಿಂದ ರಾತ್ರಿ 10 ಹಾಗೂ ಮೂರನೇ ಪಾಳಿಯವರು ರಾತ್ರಿ 10ರಿಂದ ಮರುದಿನ ಬೆಳಿಗ್ಗೆ 6ರವರೆಗೆ ಕಾರ್ಯನಿರ್ವಹಿಸಲಿದ್ದಾರೆ. ಇದು ಒಂದು ತಿಂಗಳು ಅಥವಾ ಮುಂದಿನ ಆದೇಶದವರೆಗೆ ಜಾರಿಯಲ್ಲಿರುತ್ತದೆ’ ಎಂದೂ ಹೇಳಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>