‘ಹೆಬ್ಬಾಳ ಸಮೀಪದ ಆನಂದನಗರದಲ್ಲಿ ವಿಶ್ವವಿದ್ಯಾಲಯ ಇದೆ. ಇಲ್ಲಿನ ವಸತಿ ನಿಲಯಗಳಿಂದಉತ್ಪತ್ತಿಯಾಗುವ ತ್ಯಾಜ್ಯ ನೀರು ಸಂಗ್ರಹಿಸಿ, ಮರುಬಳಕೆಗಾಗಿ ಅದನ್ನು ನೈಸರ್ಗಿಕ ಸಂಪನ್ಮೂಲಗಳ ಮೂಲಕವೇ ಪ್ರತ್ಯೇಕವಾಗಿ ಸಂಸ್ಕರಿಸುವುದು ಯೋಜನೆಯ ಗುರಿ. ಸಂಸ್ಕರಿಸಿದ ನೀರನ್ನು ವಿಶ್ವವಿದ್ಯಾಲಯದ ಕ್ಯಾಂಪಸ್, ಕ್ಯಾಂಟೀನ್ ಹಾಗೂ ಉದ್ಯಾನಕ್ಕೆ ಬಳಸಲಾಗುತ್ತದೆ. ವಿಶ್ವವಿದ್ಯಾಲಯದ ಆವರಣದಲ್ಲಿ ಸುಸ್ಥಿರತೆ ಸ್ಥಾಪಿಸಲು ಈ ಯೋಜನೆ ಜಾರಿಗೊಳಿಸಲಾಗಿದೆ’ ಎಂದು ಪ್ರಕಟಣೆ ತಿಳಿಸಿದೆ.