ಕ್ಯಾನ್ಸರ್ಗೆ ವಿದಾಯ ಹೇಳಿ, ಹೊಸ ಜೀವನಕ್ಕೆ ನಾಂದಿ ಹಾಡಿ’ ಎಂಬ ಘೋಷವಾಕ್ಯದಡಿ ಬೆಂಗಳೂರಿನಲ್ಲಿ ಶನಿವಾರ ಕ್ಯಾನ್ಸರ್ ತಪಾಸಣೆ ಮತ್ತು ಜಾಗೃತಿ ಕಾರ್ಯಕ್ರಮ ನಡೆಯಿತು. ಕರ್ನಾಟಕ ಆರೋಗ್ಯ ಇಲಾಖೆಯ ಸಹಯೋಗದಲ್ಲಿ ‘ಪ್ರಜಾವಾಣಿ’ ಮತ್ತು ಡೆಕ್ಕನ್ ಹೆರಾಲ್ಡ್ ಆಯೋಜಿಸಿದ್ದ ಈ ಕಾರ್ಯಕ್ರಮ ಭಾನುವಾರವೂ (ಫೆ.25, 2024) ಮುಂದುವರಿಯಲಿದ್ದು, ಬೆಳಿಗ್ಗೆ 10ರಿಂದ ಸಂಜೆ 7ರವರೆಗೆ ಇರಲಿದೆ. ಉಚಿತ ತಪಾಸಣೆ ಸೌಲಭ್ಯ ಸಾರ್ವಜನಿಕರಿಗೆ ದೊರೆಯಲಿದೆ.