<p><strong>ಬೆಂಗಳೂರು:</strong> ಜಲಮಂಡಳಿಯು ಉತ್ತರ, ಕೇಂದ್ರ ಮತ್ತು ಆಗ್ನೇಯ ವಲಯಗಳಲ್ಲಿ ನೀರಿನ ಸೋರಿಕೆ ತಡೆಯುವ ಕಾಮಗಾರಿ ಕೈಗೆತ್ತಿಕೊಂಡಿದೆ.</p>.<p>ಯಲಹಂಕ (ಉತ್ತರ 2), ಸಹಕಾರ ನಗರ (ಉತ್ತರ 3), ಶಿವಾಜಿನಗರ (ಕೇಂದ್ರ) ಮತ್ತು ಇಂದಿರಾನಗರ (ಆಗ್ನೇಯ) ಉಪ ವಿಭಾಗಗಳಲ್ಲಿ ಕಾಮಗಾರಿಗಳು ಈಗಾಗಲೇ ಆರಂಭಗೊಂಡಿವೆ. ₹ 203 ಕೋಟಿ ವೆಚ್ಚದ ಈ ಕಾಮಗಾರಿಗಳ ಗುತ್ತಿಗೆಯನ್ನು ಇಸ್ರೇಲ್ನ ತಹಲ್ ಕಂಪನಿಗೆ ನೀಡಲಾಗಿದೆ.</p>.<p>‘ಈ ಹಿಂದೆ ನಗರದ ಕೇಂದ್ರ, ಪಶ್ಚಿಮ ಮತ್ತು ದಕ್ಷಿಣ ವಲಯದಲ್ಲಿ ಸೋರಿಕೆ ತಡೆಗೆ ಕ್ರಮ ಕೈಗೊಂಡ ಬಳಿಕ ಸರಾಸರಿ ವರಮಾನ ಪ್ರತಿ ತಿಂಗಳು ₹ 20 ಕೋಟಿ ಹೆಚ್ಚಳ ಆಗಿದೆ. ಯೋಜನೆ ಅನುಷ್ಠಾನಕ್ಕೆ ಮುನ್ನ ₹ 90 ಕೋಟಿ ವರಮಾನ ಬರುತ್ತಿತ್ತು. ಈಗ ತಿಂಗಳಿಗೆ ಸರಾಸರಿ ₹ 110 ಕೋಟಿ ವರಮಾನ ಬರುತ್ತಿದೆ’ ಎಂದು ಜಲಮಂಡಳಿಯ ಪ್ರಧಾನ ಮುಖ್ಯ ಎಂಜಿನಿಯರ್ ಕೆಂಪರಾಮಯ್ಯ ‘ಪ್ರಜಾವಾಣಿ’ಗೆ ತಿಳಿಸಿದರು.</p>.<p>ನಗರಕ್ಕೆ ಪ್ರತಿನಿತ್ಯ 135 ಕೋಟಿ ಲೀಟರ್ ಕಾವೇರಿ ನೀರು ಪೂರೈಕೆಯಾಗುತ್ತಿದೆ. ಅದರಲ್ಲಿ ಶೇ 48ರಷ್ಟು ನೀರು ಲೆಕ್ಕಕ್ಕೆ ಸಿಗುತ್ತಿರಲಿಲ್ಲ. ಅಂದರೆ 65 ಕೋಟಿ ಲೀಟರ್ ನೀರಿನಿಂದ ಜಲಮಂಡಳಿಗೆ ಯಾವುದೇ ವರಮಾನ ಬರುತ್ತಿರಲಿಲ್ಲ. ನೀರಿನ ಸೋರಿಕೆ ತಡೆಗಟ್ಟಲು ದಕ್ಷಿಣ ವಿಭಾಗದಲ್ಲಿ 2012ರಲ್ಲಿ ₹153 ಕೋಟಿ ವೆಚ್ಚದಲ್ಲಿ ಸೋರಿಕೆ ತಡೆ ಯೋಜನೆಗೆ ಚಾಲನೆ ನೀಡಲಾಗಿತ್ತು. ಎಲ್ ಆ್ಯಂಡ್ ಟಿ ಸಂಸ್ಥೆಗೆ ಗುತ್ತಿಗೆ ನೀಡಲಾಗಿತ್ತು. ಸೋರಿಕೆ ಪ್ರಮಾಣವನ್ನು ಶೇ 16ಕ್ಕೆ ಇಳಿಸಬೇಕು ಎಂದು ಸೂಚಿಸಲಾಗಿತ್ತು.</p>.<p>2014ರಲ್ಲಿ ಕೇಂದ್ರ ವಿಭಾಗದಲ್ಲಿ ₹160 ಕೋಟಿ, ಪಶ್ಚಿಮ ವಿಭಾಗದಲ್ಲಿ ₹257 ಕೋಟಿ ವೆಚ್ಚದ ಕಾಮಗಾರಿ ಆರಂಭಿಸಲಾಗಿತ್ತು. ನಗರದಲ್ಲಿ ಲೆಕ್ಕಕ್ಕೆ ಸಿಗದ ನೀರಿನ ಪ್ರಮಾಣ ಈಗ ಶೇ 36ಕ್ಕೆ ಇಳಿದಿದೆ ಎಂದು ಜಲಮಂಡಳಿಯ ಅಧಿಕಾರಿಗಳು ತಿಳಿಸಿದರು.</p>.<p>ಅಂತರರಾಷ್ಟ್ರೀಯ ಮಾನದಂಡದ ಪ್ರಕಾರ ನೀರು ಪೂರೈಕೆ ಸಂದರ್ಭದಲ್ಲಿ ಶೇ 16ರಷ್ಟು ಸೋರಿಕೆಯಾಗುತ್ತದೆ. ಆದರೆ ನಗರದಲ್ಲಿ ಅದರ ಪ್ರಮಾಣ ಶೇ 20ರಷ್ಟು ಇದೆ. ಉಳಿದದ್ದು ವಾಣಿಜ್ಯ ನಷ್ಟ. ಅನೇಕ ಕಡೆಗಳಿಗೆ ನೀರು ಪುಕ್ಕಟೆಯಾಗಿ ಪೂರೈಕೆಯಾಗುತ್ತಿದೆ. ಇದರಿಂದ ಮಂಡಳಿ ಪ್ರತಿ ತಿಂಗಳು ₹20 ಕೋಟಿ ನಷ್ಟ ಅನುಭವಿಸುತ್ತಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಜಲಮಂಡಳಿಯು ಉತ್ತರ, ಕೇಂದ್ರ ಮತ್ತು ಆಗ್ನೇಯ ವಲಯಗಳಲ್ಲಿ ನೀರಿನ ಸೋರಿಕೆ ತಡೆಯುವ ಕಾಮಗಾರಿ ಕೈಗೆತ್ತಿಕೊಂಡಿದೆ.</p>.<p>ಯಲಹಂಕ (ಉತ್ತರ 2), ಸಹಕಾರ ನಗರ (ಉತ್ತರ 3), ಶಿವಾಜಿನಗರ (ಕೇಂದ್ರ) ಮತ್ತು ಇಂದಿರಾನಗರ (ಆಗ್ನೇಯ) ಉಪ ವಿಭಾಗಗಳಲ್ಲಿ ಕಾಮಗಾರಿಗಳು ಈಗಾಗಲೇ ಆರಂಭಗೊಂಡಿವೆ. ₹ 203 ಕೋಟಿ ವೆಚ್ಚದ ಈ ಕಾಮಗಾರಿಗಳ ಗುತ್ತಿಗೆಯನ್ನು ಇಸ್ರೇಲ್ನ ತಹಲ್ ಕಂಪನಿಗೆ ನೀಡಲಾಗಿದೆ.</p>.<p>‘ಈ ಹಿಂದೆ ನಗರದ ಕೇಂದ್ರ, ಪಶ್ಚಿಮ ಮತ್ತು ದಕ್ಷಿಣ ವಲಯದಲ್ಲಿ ಸೋರಿಕೆ ತಡೆಗೆ ಕ್ರಮ ಕೈಗೊಂಡ ಬಳಿಕ ಸರಾಸರಿ ವರಮಾನ ಪ್ರತಿ ತಿಂಗಳು ₹ 20 ಕೋಟಿ ಹೆಚ್ಚಳ ಆಗಿದೆ. ಯೋಜನೆ ಅನುಷ್ಠಾನಕ್ಕೆ ಮುನ್ನ ₹ 90 ಕೋಟಿ ವರಮಾನ ಬರುತ್ತಿತ್ತು. ಈಗ ತಿಂಗಳಿಗೆ ಸರಾಸರಿ ₹ 110 ಕೋಟಿ ವರಮಾನ ಬರುತ್ತಿದೆ’ ಎಂದು ಜಲಮಂಡಳಿಯ ಪ್ರಧಾನ ಮುಖ್ಯ ಎಂಜಿನಿಯರ್ ಕೆಂಪರಾಮಯ್ಯ ‘ಪ್ರಜಾವಾಣಿ’ಗೆ ತಿಳಿಸಿದರು.</p>.<p>ನಗರಕ್ಕೆ ಪ್ರತಿನಿತ್ಯ 135 ಕೋಟಿ ಲೀಟರ್ ಕಾವೇರಿ ನೀರು ಪೂರೈಕೆಯಾಗುತ್ತಿದೆ. ಅದರಲ್ಲಿ ಶೇ 48ರಷ್ಟು ನೀರು ಲೆಕ್ಕಕ್ಕೆ ಸಿಗುತ್ತಿರಲಿಲ್ಲ. ಅಂದರೆ 65 ಕೋಟಿ ಲೀಟರ್ ನೀರಿನಿಂದ ಜಲಮಂಡಳಿಗೆ ಯಾವುದೇ ವರಮಾನ ಬರುತ್ತಿರಲಿಲ್ಲ. ನೀರಿನ ಸೋರಿಕೆ ತಡೆಗಟ್ಟಲು ದಕ್ಷಿಣ ವಿಭಾಗದಲ್ಲಿ 2012ರಲ್ಲಿ ₹153 ಕೋಟಿ ವೆಚ್ಚದಲ್ಲಿ ಸೋರಿಕೆ ತಡೆ ಯೋಜನೆಗೆ ಚಾಲನೆ ನೀಡಲಾಗಿತ್ತು. ಎಲ್ ಆ್ಯಂಡ್ ಟಿ ಸಂಸ್ಥೆಗೆ ಗುತ್ತಿಗೆ ನೀಡಲಾಗಿತ್ತು. ಸೋರಿಕೆ ಪ್ರಮಾಣವನ್ನು ಶೇ 16ಕ್ಕೆ ಇಳಿಸಬೇಕು ಎಂದು ಸೂಚಿಸಲಾಗಿತ್ತು.</p>.<p>2014ರಲ್ಲಿ ಕೇಂದ್ರ ವಿಭಾಗದಲ್ಲಿ ₹160 ಕೋಟಿ, ಪಶ್ಚಿಮ ವಿಭಾಗದಲ್ಲಿ ₹257 ಕೋಟಿ ವೆಚ್ಚದ ಕಾಮಗಾರಿ ಆರಂಭಿಸಲಾಗಿತ್ತು. ನಗರದಲ್ಲಿ ಲೆಕ್ಕಕ್ಕೆ ಸಿಗದ ನೀರಿನ ಪ್ರಮಾಣ ಈಗ ಶೇ 36ಕ್ಕೆ ಇಳಿದಿದೆ ಎಂದು ಜಲಮಂಡಳಿಯ ಅಧಿಕಾರಿಗಳು ತಿಳಿಸಿದರು.</p>.<p>ಅಂತರರಾಷ್ಟ್ರೀಯ ಮಾನದಂಡದ ಪ್ರಕಾರ ನೀರು ಪೂರೈಕೆ ಸಂದರ್ಭದಲ್ಲಿ ಶೇ 16ರಷ್ಟು ಸೋರಿಕೆಯಾಗುತ್ತದೆ. ಆದರೆ ನಗರದಲ್ಲಿ ಅದರ ಪ್ರಮಾಣ ಶೇ 20ರಷ್ಟು ಇದೆ. ಉಳಿದದ್ದು ವಾಣಿಜ್ಯ ನಷ್ಟ. ಅನೇಕ ಕಡೆಗಳಿಗೆ ನೀರು ಪುಕ್ಕಟೆಯಾಗಿ ಪೂರೈಕೆಯಾಗುತ್ತಿದೆ. ಇದರಿಂದ ಮಂಡಳಿ ಪ್ರತಿ ತಿಂಗಳು ₹20 ಕೋಟಿ ನಷ್ಟ ಅನುಭವಿಸುತ್ತಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>