ರಾಜ ಕಾಲುವೆ ನೀರು ಬೆಳ್ಳಂದೂರು ಕೆರೆಗೆ ಸೇರುತ್ತಿದೆ. ಇಂಥ ಕಾಲುವೆಯಲ್ಲಿ ಕೊಳಚೆ ನೀರನ್ನು ಬಿಡಲಾಗುತ್ತಿತ್ತು. ಇದನ್ನು ಗಮನಿಸಿದ್ದ ಲಕ್ಷ್ಮೀಕಾಂತ್, ಈ ಕುರಿತು ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಗೆ ಮತ್ತು ಪೊಲೀಸರಿಗೆ 2018ರ ಅಕ್ಟೋಬರ್ 17ರಂದು ದೂರು ನೀಡಿದ್ದರು. ಗುತ್ತಿಗೆದಾರರ ವಿರುದ್ಧ ತೆಗೆದುಕೊಂಡ ಕ್ರಮದ ಬಗ್ಗೆ ತಿಳಿಸುವಂತೆ ಮಾಹಿತಿ ಹಕ್ಕು ಕಾಯ್ದೆಯಡಿ ಅರ್ಜಿಯನ್ನೂ ಸಲ್ಲಿಸಿದ್ದರು.