<p><strong>ಬೆಂಗಳೂರು: </strong>‘ಜಲಮಂಡಳಿಯಲ್ಲಿ ಕೆಲಸ ಕೊಡಿಸುವುದಾಗಿ ಹೇಳಿದ್ದ ರತ್ನಮ್ಮ ಎಂಬುವರು ₹16 ಲಕ್ಷ ಪಡೆದು ವಂಚಿಸಿದ್ದಾರೆ’ ಎಂದು ಆರೋಪಿಸಿ ಸಾಫ್ಟ್ವೇರ್ ಎಂಜಿನಿಯರ್ ಪವನ್ಸಿಂಹ ಎಂಬುವರು ಚನ್ನಮ್ಮನಕೆರೆ ಅಚ್ಚುಕಟ್ಟು ಠಾಣೆಗೆ ದೂರು ನೀಡಿದ್ದು, ಎಫ್ಐಆರ್ ದಾಖಲಾಗಿದೆ.</p>.<p>‘ರಾಜರಾಜೇಶ್ವರಿನಗರ ನಿವಾಸಿ ಎನ್ನಲಾದ ರತ್ನಮ್ಮ ಸ್ನೇಹಿತರೊಬ್ಬರ ಮೂಲಕ ಪರಿಚಯವಾಗಿದ್ದರು. ಜಲಮಂಡಳಿಯಲ್ಲಿ ಸಹಾಯಕ ಎಂಜಿನಿಯರ್ ಹುದ್ದೆಗಳು ಖಾಲಿ ಇದ್ದು, ಭರ್ತಿಗೆ ನೇಮಕಾತಿ ಪ್ರಕ್ರಿಯೆ ಆರಂಭವಾಗಿರುವುದಾಗಿ ಹೇಳಿದ್ದರು. ಒಂದು ಹುದ್ದೆಗೆ ₹ 50 ಲಕ್ಷ ನಿಗದಿ ಮಾಡಿರುವುದಾಗಿ ತಿಳಿಸಿದ್ದರು. ಅಷ್ಟು ಹಣ ಕೊಡಲು ಆಗುವುದಿಲ್ಲವೆಂದು ನಾನು ಹೇಳಿದ್ದೆ’ ಎಂದು ಪವನ್ಸಿಂಹ ದೂರಿನಲ್ಲಿ ತಿಳಿಸಿದ್ದಾರೆ.</p>.<p>‘ಮಾತುಕತೆ ಬಳಿಕ ₹ 25 ಲಕ್ಷಕ್ಕೆ ರತ್ನಮ್ಮ ಒಪ್ಪಿದ್ದರು. ನಂತರ, ಹಂತ ಹಂತವಾಗಿ ₹ 16 ಲಕ್ಷ ಪಡೆದಿದ್ದರು. ಉಳಿದ ಹಣ ಕೊಡುವಂತೆಯೂ ಒತ್ತಾಯಿಸುತ್ತಿದ್ದರು. ಅನುಮಾನ ಬಂದು ಜಲಮಂಡಳಿ ಕಚೇರಿಗೆ ಹೋಗಿ ವಿಚಾರಿಸಿದ್ದೆ. ಅವಾಗಲೇ ರತ್ನಮ್ಮ ಹಲವರಿಗೆ ವಂಚನೆ ಮಾಡಿದ್ದು ತಿಳಿಯಿತು’ ಎಂದೂ ದೂರಿನಲ್ಲಿ ಉಲ್ಲೇಖಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>‘ಜಲಮಂಡಳಿಯಲ್ಲಿ ಕೆಲಸ ಕೊಡಿಸುವುದಾಗಿ ಹೇಳಿದ್ದ ರತ್ನಮ್ಮ ಎಂಬುವರು ₹16 ಲಕ್ಷ ಪಡೆದು ವಂಚಿಸಿದ್ದಾರೆ’ ಎಂದು ಆರೋಪಿಸಿ ಸಾಫ್ಟ್ವೇರ್ ಎಂಜಿನಿಯರ್ ಪವನ್ಸಿಂಹ ಎಂಬುವರು ಚನ್ನಮ್ಮನಕೆರೆ ಅಚ್ಚುಕಟ್ಟು ಠಾಣೆಗೆ ದೂರು ನೀಡಿದ್ದು, ಎಫ್ಐಆರ್ ದಾಖಲಾಗಿದೆ.</p>.<p>‘ರಾಜರಾಜೇಶ್ವರಿನಗರ ನಿವಾಸಿ ಎನ್ನಲಾದ ರತ್ನಮ್ಮ ಸ್ನೇಹಿತರೊಬ್ಬರ ಮೂಲಕ ಪರಿಚಯವಾಗಿದ್ದರು. ಜಲಮಂಡಳಿಯಲ್ಲಿ ಸಹಾಯಕ ಎಂಜಿನಿಯರ್ ಹುದ್ದೆಗಳು ಖಾಲಿ ಇದ್ದು, ಭರ್ತಿಗೆ ನೇಮಕಾತಿ ಪ್ರಕ್ರಿಯೆ ಆರಂಭವಾಗಿರುವುದಾಗಿ ಹೇಳಿದ್ದರು. ಒಂದು ಹುದ್ದೆಗೆ ₹ 50 ಲಕ್ಷ ನಿಗದಿ ಮಾಡಿರುವುದಾಗಿ ತಿಳಿಸಿದ್ದರು. ಅಷ್ಟು ಹಣ ಕೊಡಲು ಆಗುವುದಿಲ್ಲವೆಂದು ನಾನು ಹೇಳಿದ್ದೆ’ ಎಂದು ಪವನ್ಸಿಂಹ ದೂರಿನಲ್ಲಿ ತಿಳಿಸಿದ್ದಾರೆ.</p>.<p>‘ಮಾತುಕತೆ ಬಳಿಕ ₹ 25 ಲಕ್ಷಕ್ಕೆ ರತ್ನಮ್ಮ ಒಪ್ಪಿದ್ದರು. ನಂತರ, ಹಂತ ಹಂತವಾಗಿ ₹ 16 ಲಕ್ಷ ಪಡೆದಿದ್ದರು. ಉಳಿದ ಹಣ ಕೊಡುವಂತೆಯೂ ಒತ್ತಾಯಿಸುತ್ತಿದ್ದರು. ಅನುಮಾನ ಬಂದು ಜಲಮಂಡಳಿ ಕಚೇರಿಗೆ ಹೋಗಿ ವಿಚಾರಿಸಿದ್ದೆ. ಅವಾಗಲೇ ರತ್ನಮ್ಮ ಹಲವರಿಗೆ ವಂಚನೆ ಮಾಡಿದ್ದು ತಿಳಿಯಿತು’ ಎಂದೂ ದೂರಿನಲ್ಲಿ ಉಲ್ಲೇಖಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>