‘ರಾಜರಾಜೇಶ್ವರಿನಗರ ನಿವಾಸಿ ಎನ್ನಲಾದ ರತ್ನಮ್ಮ ಸ್ನೇಹಿತರೊಬ್ಬರ ಮೂಲಕ ಪರಿಚಯವಾಗಿದ್ದರು. ಜಲಮಂಡಳಿಯಲ್ಲಿ ಸಹಾಯಕ ಎಂಜಿನಿಯರ್ ಹುದ್ದೆಗಳು ಖಾಲಿ ಇದ್ದು, ಭರ್ತಿಗೆ ನೇಮಕಾತಿ ಪ್ರಕ್ರಿಯೆ ಆರಂಭವಾಗಿರುವುದಾಗಿ ಹೇಳಿದ್ದರು. ಒಂದು ಹುದ್ದೆಗೆ ₹ 50 ಲಕ್ಷ ನಿಗದಿ ಮಾಡಿರುವುದಾಗಿ ತಿಳಿಸಿದ್ದರು. ಅಷ್ಟು ಹಣ ಕೊಡಲು ಆಗುವುದಿಲ್ಲವೆಂದು ನಾನು ಹೇಳಿದ್ದೆ’ ಎಂದು ಪವನ್ಸಿಂಹ ದೂರಿನಲ್ಲಿ ತಿಳಿಸಿದ್ದಾರೆ.