ಗುರುವಾರ, 3 ಜುಲೈ 2025
×
ADVERTISEMENT
ADVERTISEMENT

ನೀರು ಬಳಕೆ: ಪಂಚಸೂತ್ರಕ್ಕೆ ‘ಗ್ರೀನ್‌ ಸ್ಟಾರ್‌’

ಜಲಕ್ಷಾಮದ ವಿರುದ್ಧ ತಂತ್ರಜ್ಞಾನದ ಅಸ್ತ್ರ: ಜಲಮಂಡಳಿ ಅಧ್ಯಕ್ಷ
Published : 22 ಮಾರ್ಚ್ 2024, 23:43 IST
Last Updated : 22 ಮಾರ್ಚ್ 2024, 23:43 IST
ಫಾಲೋ ಮಾಡಿ
Comments
ನೀರಿನ ಸಮಸ್ಯೆ ಇಳಿಕೆ
‘ನಗರದ ಹೃದಯ ಭಾಗದಲ್ಲಿ ಹಾಗೂ ಪ್ರಮುಖ ಪ್ರದೇಶಗಳಲ್ಲಿದ್ದ ನೀರಿನ ಸಮಸ್ಯೆ ಗಣನೀಯವಾಗಿ ಕಡಿಮೆಯಾಗಿದೆ. ಮೊದಲ ಹಂತದಲ್ಲಿ ಪ್ರತಿನಿತ್ಯ 300ಕ್ಕೂ ಹೆಚ್ಚು ದೂರುಗಳು ದಾಖಲಾಗುತ್ತಿದ್ದವು. ಈಗ ಅವುಗಳ ಸಂಖ್ಯೆ 100ಕ್ಕೆ ಇಳಿದಿದೆ. ಮುಂದಿನ ದಿನಗಳಲ್ಲಿ ಸಮರ್ಪಕ ನೀರು ಸರಬರಾಜು ಮಾಡುವ ಮೂಲಕ ದೂರು ಮತ್ತು ಸಮಸ್ಯೆಗಳ ಪ್ರಮಾಣವನ್ನು ಇನ್ನಷ್ಟು ಕಡಿಮೆ ಮಾಡಲಾಗುತ್ತದೆ’ ಎಂದು ಜಲಮಂಡಳಿ ಅಧ್ಯಕ್ಷ ರಾಮ್‌ಪ್ರಸಾತ್‌ ಹೇಳಿದರು.
‘ರೈನ್‌ ಡ್ಯಾನ್ಸ್‌’: ಹೋಟೆಲ್‌ಗೆ ನೋಟಿಸ್‌
ಹೋಳಿ ಆಚರಣೆಗೆ ರೈನ್‌ ಡ್ಯಾನ್ಸ್‌ ಆಯೋಜಿಸುವುದಾಗಿ ಪ್ರಕಟಿಸಿದ್ದ ಮೈಸೂರು ರಸ್ತೆಯ ಜೆ.ಕೆ. ಗ್ರ್ಯಾಂಡ್‌ ಅರೆನಾ ಹಾಗೂ ಜಯಮಹಲ್‌ ಪ್ಯಾಲೆಸ್‌ ಹೋಟೆಲ್‌ಗಳಿಗೆ ಜಲಮಂಡಳಿ ಅಧಿಕಾರಿಗಳು ಭೇಟಿ ನೀಡಿ ‘ರೈನ್‌ ಡ್ಯಾನ್ಸ್‌’ಗೆ ಕಾವೇರಿ ಹಾಗೂ ಕೊಳವೆಬಾವಿ ನೀರು ಬಳಸದಂತೆ ನೊಟೀಸ್‌ ನೀಡಿದರು. ‘ಸಾಂಸ್ಕೃತಿಕ ಹಬ್ಬವಾಗಿ ಆಚರಣೆಗೆ ಯಾವುದೇ ನಿಷೇಧ ಇಲ್ಲ. ಆದರೆ ವಾಣಿಜ್ಯ ಉದ್ದೇಶಗಳಿಗಾಗಿ ರೈನ್‌ ಡ್ಯಾನ್ಸ್‌ ಹಾಗೂ ಪೂಲ್‌ ಡ್ಯಾನ್ಸ್‌ ಆಯೋಜಿಸುವುದರಿಂದ ನೀರು ಪೋಲಾಗುತ್ತದೆ. ಇದನ್ನು ತಡೆಯಬೇಕು’ ಎಂದು ಹೋಟೆಲ್‌ ಸಿಬ್ಬಂದಿಗೆ ಹೇಳಿದರು. ‘ಇದಕ್ಕೆ ಪೂರಕವಾಗಿ ಸ್ಪಂದಿಸಿದ ಹೋಟೆಲ್‌ ಸಿಬ್ಬಂದಿ ಮಂಡಳಿಯ ನಿರ್ದೇಶನದಂತೆ ‘ರೈನ್‌ ಡ್ಯಾನ್ಸ್‌ ಹಾಗೂ ಪೂಲ್‌ ಡ್ಯಾನ್ಸ್‌ ಮಾಡುವುದಿಲ್ಲ’ ಎಂದು ಹೇಳಿದರು’ ಎಂದು ಜಲಮಂಡಳಿ ಪ್ರಕಟಣೆ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT