<p><strong>ಕೆ.ಆರ್. ಪುರ:</strong> ಸಮೀಪದ ದೇವಸಂದ್ರ ಮುಖ್ಯರಸ್ತೆಯ ಕಾವೇರಿ ಬೇಕರಿ ಹಿಂಭಾಗದಲ್ಲಿರುವ ಮಂಜುನಾಥ ಬಡಾವಣೆಗೆ ಪೊರೈಕೆಯಾಗುತ್ತಿರುವ ಕಾವೇರಿ ನೀರು ದುರ್ವಾಸನೆಯಿಂದ ಕೂಡಿದೆ ಎಂದು ನಾಗರಿಕರು ದೂರಿದ್ದಾರೆ.</p>.<p>‘ಮೂರು ತಿಂಗಳಿನಿಂದ ನೀರು ಇದೇ ರೀತಿ ವಾಸನೆ ಬರುತ್ತಿದೆ. ಕುಡಿಯುವುದಕ್ಕಲ್ಲದೇ ಬೇರೆ ಕೆಲಸಗಳಿಗೆ ಬಳಸಲೂ ಯೋಗ್ಯವಾಗಿಲ್ಲ’ ಎಂದು ಸ್ಥಳೀಯರು ಹೇಳುತ್ತಾರೆ. ‘ಇಂಥ ನೀರು ಬಳಸುವುದರಿಂದ ಜನರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವ ಸಾಧ್ಯತೆ ಇದೆ’ ಎಂಬುದು ಅವರ ಆತಂಕವಾಗಿದೆ.</p>.<p>‘ಸಂಪ್ ಮತ್ತು ಮನೆಯ ನೀರಿನ ಟ್ಯಾಂಕ್ಗಳಲ್ಲಿ ಸಂಗ್ರಹಿಸುವ ಕಾವೇರಿ ನೀರಿನಿಂದಲೂ ದುರ್ವಾಸನೆ ಬರುತ್ತಿದೆ. ಇದರಿಂದಾಗಿ ವಾರಕ್ಕೊಮ್ಮೆ ನೀರಿನ ಟ್ಯಾಂಕ್ ಮತ್ತು ಸಂಪ್ಗಳನ್ನು ಸ್ವಚ್ಚಗೊಳಿಸುತ್ತಿದ್ದೇವೆ’ ಎನ್ನುತ್ತಾರೆ ಸ್ಥಳೀಯ ನಿವಾಸಿ ಸುರೇಶ್.</p>.<p>‘ಈ ಸಮಸ್ಯೆಯನ್ನು ಜಲಮಂಡಳಿ ಅಧಿಕಾರಿಗಳ ಗಮನಕ್ಕೆ ತಂದು, ಪರಿಹರಿಸುವಂತೆ ಮನವಿ ಮಾಡಿದ್ದೇವೆ. ಆದರೆ, ಏನೂ ಕ್ರಮ ಕೈಗೊಂಡಿಲ್ಲ’ ಎಂದು ಸ್ಥಳೀಯ ನಿವಾಸಿ ಕುಮಾರ್ ಆಕ್ರೋಶ ವ್ಯಕ್ತಪಡಿಸಿದರು.</p>.<p>‘ಶಾಸಕ ಬೈರತಿ ಬಸವರಾಜ ಅವರು ಕಾರ್ಯಕ್ರಮವೊಂದಕ್ಕೆ ಇಲ್ಲಿಗೆ ಭೇಟಿ ನೀಡಿದ್ದಾಗ, ಈ ಸಮಸ್ಯೆ ಬಗ್ಗೆ ಮನವರಿಕೆ ಮಾಡಿದ್ದೆವು. ಆಗ ಅವರು ಸ್ಥಳದಲ್ಲಿಯೇ ಜಲಮಂಡಳಿ ಅಧಿಕಾರಿಗಳಿಗೆ ಕರೆ ಮಾಡಿ ಸಮಸ್ಯೆ ಪರಿಹರಿಸುವಂತೆ ತಾಕೀತು ಮಾಡಿದ್ದರು. ಈವರೆಗೂ ಸಮಸ್ಯೆ ಬಗೆಹರಿದಿಲ್ಲ’ ಎಂದು ಸ್ಥಳೀಯ ನಿವಾಸಿಗಳು ದೂರಿದರು.</p>.<p>ಸಮಸ್ಯೆ ಕುರಿತು ಜಲಮಂಡಳಿಯ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ವೆಂಕಟರಮಣ ಅವರನ್ನು ಕೇಳಿದಾಗ, ‘ಕಲುಷಿತ ನೀರು ಬರುತ್ತಿದೆ ಎಂದು ಹೇಳಿದ್ದಾರೆ. ಆದರೆ, ಈ ಸಂಬಂಧ ಲಿಖಿತವಾಗಿ ದೂರು ಬಂದಿಲ್ಲ’ ಎಂದು ಉತ್ತರ ನೀಡಿದರು. ಕಾರ್ಯಪಾಲಕ ಎಂಜಿನಿಯರ್ ಚನ್ನಬಸವಯ್ಯ ಅವರು, ‘ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿ, ಸಮಸ್ಯೆ ಪರಿಹರಿಸುತ್ತೇವೆ’ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೆ.ಆರ್. ಪುರ:</strong> ಸಮೀಪದ ದೇವಸಂದ್ರ ಮುಖ್ಯರಸ್ತೆಯ ಕಾವೇರಿ ಬೇಕರಿ ಹಿಂಭಾಗದಲ್ಲಿರುವ ಮಂಜುನಾಥ ಬಡಾವಣೆಗೆ ಪೊರೈಕೆಯಾಗುತ್ತಿರುವ ಕಾವೇರಿ ನೀರು ದುರ್ವಾಸನೆಯಿಂದ ಕೂಡಿದೆ ಎಂದು ನಾಗರಿಕರು ದೂರಿದ್ದಾರೆ.</p>.<p>‘ಮೂರು ತಿಂಗಳಿನಿಂದ ನೀರು ಇದೇ ರೀತಿ ವಾಸನೆ ಬರುತ್ತಿದೆ. ಕುಡಿಯುವುದಕ್ಕಲ್ಲದೇ ಬೇರೆ ಕೆಲಸಗಳಿಗೆ ಬಳಸಲೂ ಯೋಗ್ಯವಾಗಿಲ್ಲ’ ಎಂದು ಸ್ಥಳೀಯರು ಹೇಳುತ್ತಾರೆ. ‘ಇಂಥ ನೀರು ಬಳಸುವುದರಿಂದ ಜನರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವ ಸಾಧ್ಯತೆ ಇದೆ’ ಎಂಬುದು ಅವರ ಆತಂಕವಾಗಿದೆ.</p>.<p>‘ಸಂಪ್ ಮತ್ತು ಮನೆಯ ನೀರಿನ ಟ್ಯಾಂಕ್ಗಳಲ್ಲಿ ಸಂಗ್ರಹಿಸುವ ಕಾವೇರಿ ನೀರಿನಿಂದಲೂ ದುರ್ವಾಸನೆ ಬರುತ್ತಿದೆ. ಇದರಿಂದಾಗಿ ವಾರಕ್ಕೊಮ್ಮೆ ನೀರಿನ ಟ್ಯಾಂಕ್ ಮತ್ತು ಸಂಪ್ಗಳನ್ನು ಸ್ವಚ್ಚಗೊಳಿಸುತ್ತಿದ್ದೇವೆ’ ಎನ್ನುತ್ತಾರೆ ಸ್ಥಳೀಯ ನಿವಾಸಿ ಸುರೇಶ್.</p>.<p>‘ಈ ಸಮಸ್ಯೆಯನ್ನು ಜಲಮಂಡಳಿ ಅಧಿಕಾರಿಗಳ ಗಮನಕ್ಕೆ ತಂದು, ಪರಿಹರಿಸುವಂತೆ ಮನವಿ ಮಾಡಿದ್ದೇವೆ. ಆದರೆ, ಏನೂ ಕ್ರಮ ಕೈಗೊಂಡಿಲ್ಲ’ ಎಂದು ಸ್ಥಳೀಯ ನಿವಾಸಿ ಕುಮಾರ್ ಆಕ್ರೋಶ ವ್ಯಕ್ತಪಡಿಸಿದರು.</p>.<p>‘ಶಾಸಕ ಬೈರತಿ ಬಸವರಾಜ ಅವರು ಕಾರ್ಯಕ್ರಮವೊಂದಕ್ಕೆ ಇಲ್ಲಿಗೆ ಭೇಟಿ ನೀಡಿದ್ದಾಗ, ಈ ಸಮಸ್ಯೆ ಬಗ್ಗೆ ಮನವರಿಕೆ ಮಾಡಿದ್ದೆವು. ಆಗ ಅವರು ಸ್ಥಳದಲ್ಲಿಯೇ ಜಲಮಂಡಳಿ ಅಧಿಕಾರಿಗಳಿಗೆ ಕರೆ ಮಾಡಿ ಸಮಸ್ಯೆ ಪರಿಹರಿಸುವಂತೆ ತಾಕೀತು ಮಾಡಿದ್ದರು. ಈವರೆಗೂ ಸಮಸ್ಯೆ ಬಗೆಹರಿದಿಲ್ಲ’ ಎಂದು ಸ್ಥಳೀಯ ನಿವಾಸಿಗಳು ದೂರಿದರು.</p>.<p>ಸಮಸ್ಯೆ ಕುರಿತು ಜಲಮಂಡಳಿಯ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ವೆಂಕಟರಮಣ ಅವರನ್ನು ಕೇಳಿದಾಗ, ‘ಕಲುಷಿತ ನೀರು ಬರುತ್ತಿದೆ ಎಂದು ಹೇಳಿದ್ದಾರೆ. ಆದರೆ, ಈ ಸಂಬಂಧ ಲಿಖಿತವಾಗಿ ದೂರು ಬಂದಿಲ್ಲ’ ಎಂದು ಉತ್ತರ ನೀಡಿದರು. ಕಾರ್ಯಪಾಲಕ ಎಂಜಿನಿಯರ್ ಚನ್ನಬಸವಯ್ಯ ಅವರು, ‘ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿ, ಸಮಸ್ಯೆ ಪರಿಹರಿಸುತ್ತೇವೆ’ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>