ರಾಜ್ಯದ ಹಿತವನ್ನು ಕಡೆಗಣಿಸಿ ಕಾವೇರಿ ನೀರನ್ನು ತಮಿಳುನಾಡಿಗೆ ಹರಿಸಿದರು. ಈಗ ಬೆಂಗಳೂರಿಗೆ ಕಾವೇರಿ ನೀರು ಪೂರೈಕೆಯಲ್ಲಿ ಶೇಕಡ 30ರಷ್ಟು ಕಡಿತ ಮಾಡಲಾಗಿದೆ. ಕೃಷ್ಣರಾಜ ಸಾಗರ ಅಣೆಕಟ್ಟೆಯಲ್ಲಿ ಅತ್ಯಲ್ಪ ಪ್ರಮಾಣದ ನೀರು ಲಭ್ಯವಿದೆ. ಸಮಸ್ಯೆ ಬಿಗಡಾಯಿಸುತ್ತಿದ್ದು, ಸರ್ಕಾರದಿಂದ ಪರಿಹಾರ ಕ್ರಮವೇ ಕೈಗೊಂಡಿಲ್ಲ ಎಂದು ದೂರಿದರು.