ರಾಜರಾಜೇಶ್ವರಿನಗರ: ಚಲ್ಲಘಟ್ಟ, ಭೀಮನಕುಪ್ಪೆಯಲ್ಲಿ ₹2.25ಕೋಟಿ ವೆಚ್ಚದ ‘ಮನೆಮನೆಗೆ ನಲ್ಲಿ ನೀರು ಸಂಪರ್ಕ ಕಲ್ಪಿಸುವ ಯೋಜನೆ’ ಕಾಮಗಾರಿಕೆ ಶಾಸಕ ಎಸ್.ಟಿ.ಸೋಮಶೇಖರ್ ಚಾಲನೆ ನೀಡಿದರು.
ನಂತರ ಮಾತನಾಡಿದ ಅವರು, ‘ಮಂಚನಬೆಲೆ ಜಲಾಶಯದಿಂದ ಹಲವು ಹಳ್ಳಿಗಳಿಗೆ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸುವ ಕಾಮಗಾರಿ ನಡೆಯುತ್ತಿದೆ. ಈ ಕಾಮಗಾರಿ ಪೂರ್ಣಗೊಂಡರೆ ಕ್ಷೇತ್ರದಲ್ಲಿ ಶೇ 60ರಷ್ಟು ಗ್ರಾಮೀಣ ಭಾಗದಲ್ಲಿನ ನೀರಿನ ಸಮಸ್ಯೆ ಬಗೆ ಹರಿಯಲಿದೆ ಎಂದರು.
ರಾಮೋಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷ ವಿ.ವೇಣುಗೋಪಾಲ್ ಮಾತನಾಡಿದರು. ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷರಾದ ಬಿ.ಎಚ್.ಪ್ರಭು, ಚಂದ್ರು, ಸದಸ್ಯ ಚೇತನ್, ತಾಲ್ಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಬಿ.ಕೃಷ್ಣಪ್ಪ, ಗ್ರಾಮ ಪಂಚಾಯಿತಿ ಸದಸ್ಯ ಚೇತನ್ ಇದ್ದರು.