ಪೌರಾಡಳಿತ, ಸಣ್ಣ ಕೈಗಾರಿಕೆ ಮತ್ತು ಸಾರ್ವಜನಿಕ ಉದ್ದಿಮೆಗಳ ಸಚಿವ ಎಂ.ಟಿ.ಬಿ.ನಾಗರಾಜು ಅವರ ಮನವಿ ಮೇರೆಗೆ ವಿಧಾನಸೌಧದಲ್ಲಿ ಶುಕ್ರವಾರ ಈಶ್ವರಪ್ಪ ಅವರು ಹಿರಿಯ ಅಧಿಕಾರಿಗಳ ಸಭೆ ನಡೆಸಿದರು. ಕಳೆದ ಸಾಲಿನಲ್ಲಿ 23 ಗ್ರಾಮ ಪಂಚಾಯಿತಿಗಳನ್ನು 20 ಪಟ್ಟಣ ಪಂಚಾಯಿತಿಗಳು, 2 ಪುರಸಭೆ ಮತ್ತು 1 ನಗರಸಭೆಯನ್ನಾಗಿ ಮೇಲ್ದರ್ಜೆಗೇರಿಸಲಾಗಿತ್ತು. ಅವುಗಳಿಗೆ ಅನುದಾನ ಬಿಡುಗಡೆ ಮಾಡದ ಕಾರಣ ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿವೆ.ಮೇಲ್ದರ್ಜೆಗೇರಿಸಿರುವ ನಗರ ಸ್ಥಳೀಯ ಸಂಸ್ಥೆಗಳಿಗೆ ಕೂಡಲೇ ಅನುದಾನ ವರ್ಗಾಯಿಸಿ, ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನೀಡುವಂತೆ ಈಶ್ವರಪ್ಪ ಸೂಚನೆ ನೀಡಿದರು.