ನೀರನ್ನು ಸಂರಕ್ಷಣೆ ಮಾಡುವುದು ನಮ್ಮೆಲ್ಲರ ಕರ್ತವ್ಯವಾಗಿದ್ದು, ಜಲಶಕ್ತಿ ಯೋಜನೆಯ ಸಮರ್ಪಕ ಅನುಷ್ಟಾನಕ್ಕೆ ಪ್ರತಿಯೊಬ್ಬರೂ ಕೈಜೋಡಿಸಬೇಕು. ದೇಶದಲ್ಲಿ ಅತಿಹೆಚ್ಚು ನೀರಿನ ಅಭಾವವಿರುವ 155 ತಾಲ್ಲೂಕುಗಳು ಸೇರಿದಂತೆ ರಾಜ್ಯದ ಯಾದಗಿರಿ ಮತ್ತು ರಾಯಚೂರು ಜಿಲ್ಲೆಗಳನ್ನು ಗುರುತಿಸಲಾಗಿದ್ದು, ಮೊದಲ ಹಂತದಲ್ಲಿ ಈ ಪ್ರದೇಶಗಳಲ್ಲಿ ಜಲಸಂರಕ್ಷಣೆಗಾಗಿ ಯೋಜನೆ ಹಮ್ಮಿಕೊಳ್ಳಲಾಗುವುದು ಎಂದು ತಿಳಿಸಿದರು.