‘ನೀರಾವರಿ ಯೋಜನೆಯ ಅನುಷ್ಠಾನದಿಂದ ಈ ಭಾಗದ ಜನರಿಗೆ ಆಗುವ ಅನುಕೂಲಗಳು, ಚಿಕ್ಕಬಳ್ಳಾಪುರ, ಕೋಲಾರ, ತುಮಕೂರು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಉಂಟಾಗಿರುವ ಕುಡಿಯುವ ನೀರಿನ ಸಮಸ್ಯೆ, ಅಂತರ್ಜಲ ಕುಸಿತ, ಬೆಳೆ ಹಾನಿ ಸೇರಿದಂತೆ ವಸ್ತುಸ್ಥಿತಿಯನ್ನು ಸಚಿವರಿಗೆ ವಿವರಿಸಲಾಗಿದೆ’ ಎಂದು ಆಂಜನೇಯ ರೆಡ್ಡಿ ತಿಳಿಸಿದರು.