ರಾಜ್ಯದಲ್ಲಿ ಬೃಹತ್ ನೀರಾವರಿ ಯೋಜನೆಗಳು ಹಲವು ಹಂತಗಳಲ್ಲಿ ಅನುಷ್ಠಾನಗೊಳ್ಳುತ್ತಿವೆ. ಎಂಜಿನಿಯರ್ಗಳ ಅವಶ್ಯ ಇದೆ. ಇಲಾಖೆಯಲ್ಲಿ ಒಂದು ಸಾವಿರ ಎಂಜಿನಿಯರ್ ಹುದ್ದೆಗಳು ಖಾಲಿ ಇದ್ದು, 500 ಹುದ್ದೆಗಳ ಭರ್ತಿಗೆ ಆರ್ಥಿಕ ಇಲಾಖೆಗೆ ಪ್ರಸ್ತಾವ ಸಲ್ಲಿಸಲಾಗಿತ್ತು. 100 ಸಹಾಯಕ ಎಂಜಿನಿಯರ್ಗಳು, 300 ಕಿರಿಯ ಎಂಜಿನಿಯರ್ಗಳ ಭರ್ತಿಗೆ ಅನುಮೋದನೆ ದೊರೆತಿದೆ. ತ್ವರಿತ ನೇಮಕದ ಕಾರಣಕ್ಕೆ ಕೆಪಿಎಸ್ಸಿ ಅಥವಾ ಯಾವುದೇ ನೇಮಕಾತಿ ಪ್ರಾಧಿಕಾರಕ್ಕೆ ನೀಡದೆ, ಇಲಾಖೆಯಿಂದಲೇ ಭರ್ತಿ ಮಾಡಿಕೊಳ್ಳಲಾಗುತ್ತಿದೆ ಎಂದು ಮಾಹಿತಿ ನೀಡಿದರು.