ಬೆಂಗಳೂರು: ನಗರದಲ್ಲಿ ಸೆ.26ರಂದು ಬೆಳಿಗ್ಗೆ 11ರಿಂದ ಮಧ್ಯಾಹ್ನ 1 ಗಂಟೆಯವರೆಗೆ ನೀರು ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ.
ವಿದ್ಯುತ್ ಪರಿವರ್ತಕ ಬದಲಾಯಿಸುವ ಕಾರ್ಯ ಕೈಗೊಂಡಿರುವುದರಿಂದ ಟಿ.ಕೆ.ಹಳ್ಳಿ, ಹಾರೋಹಳ್ಳಿ ಮತ್ತು ತಾತಗುಣಿಯಲ್ಲಿರುವ ಕಾವೇರಿ ನೀರು ಸರಬರಾಜು ಯೋಜನೆಯ 1, 2, 3 ಮತ್ತು 4ನೇ ಹಂತದ 1 ಮತ್ತು 2ನೇ ಘಟ್ಟದಲ್ಲಿನ ಯಂತ್ರಗಳ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸಲಾಗುತ್ತದೆ.
ಹೀಗಾಗಿ, ನಗರದ ಎಲ್ಲ ಪ್ರದೇಶಗಳಲ್ಲಿ ನೀರು ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ ಎಂದು ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಪ್ರಕಟಣೆ ತಿಳಿಸಿದೆ.