ಬೆಂಗಳೂರು: ಕಾವೇರಿ ಜಲಾನಯದ ಪ್ರದೇಶದಲ್ಲಿ ವ್ಯಾಪಕ ಮಳೆಯಾಗಿದ್ದರಿಂದ ಬೆಂಗಳೂರು ನಗರಕ್ಕೆ ನೀರು ಸರಬರಾಜು ಮಾಡುವ ಜಲ ಮಂಡಳಿಯ ಟಿ. ಕೆ.ಹಳ್ಳಿ ಘಟಕದಲ್ಲಿ ನೀರು ನುಗ್ಗಿದ್ದು, ಯಂತ್ರಗಳು ಮುಳುಗಡೆಯಾಗಿವೆ.
ಇದರಿಂದ, ಬೆಂಗಳೂರು ನಗರಕ್ಕೆ ನೀರು ಸರಬರಾಜು ಮಾಡಲು ಸಾಧ್ಯವಾಗುತ್ತಿಲ್ಲ. ಹೀಗಾಗಿ, ಇದೇ 5 ಮತ್ತು 6ರಂದು ನಗರದ ಹಲವುಪ್ರದೇಶಗಳಲ್ಲಿ ನೀರು ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಎಂದು ಸಾರ್ವಜನಿಕ ಸಂಪರ್ಕಾಧಿಕಾರಿ ತಿಳಿಸಿದ್ದಾರೆ.
ಮಂಡ್ಯ ಜಿಲ್ಲೆಯಲ್ಲಿರುವ ಟಿ.ಕೆ. ಹಳ್ಳಿಯಲ್ಲಿರುವ ಈ ಘಟಕಕ್ಕೆಬೆಂಗಳೂರು ಜಲ ಮಂಡಳಿ ಅಧಕ್ಷರು, ಎಂಜಿನಿಯರ್ ಗಳು ಹಾಗೂ ನಗರಾಭಿವೃದ್ಧಿ ಇಲಾಖೆ ಕಾರ್ಯದರ್ಶಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.