ಬೆಂಗಳೂರು: ಕಾವೇರಿ 5ನೇ ಹಂತದ ಯೋಜನೆ ಅನುಷ್ಠಾನಕ್ಕೆ ಸಂಪರ್ಕ ಸೇರಿದಂತೆ ಹಲವು ಕಾಮಗಾರಿ ನಡೆಯಲಿರುವುದರಿಂದ ಜೂನ್ 6 ಮತ್ತು 7ರಂದು ನಗರದಲ್ಲಿ ನೀರು ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ.
ಈ ಮೊದಲು ಜೂನ್ 4, 5ರಂದು ನೀರು ಪೂರೈಕೆಯಲ್ಲಿ ವ್ಯತ್ಯವಾಗಲಿದೆ ಎಂದು ತಿಳಿಸಲಾಗಿತ್ತು. ಈಗ ಕಾಮಗಾರಿ ದಿನ ಬದಲಾಗಿದೆ. ಗುರುವಾರ, ಶುಕ್ರವಾರ ನೀರು ಪೂರೈಕೆ ವ್ಯತ್ಯಯವಾಗಲಿದೆ ಎಂದು ಜಲಮಂಡಳಿ ಪ್ರಕಟಣೆ ತಿಳಿಸಿದೆ.
ಕಾವೇರಿ 1, 2, 3ನೇ ಹಂತ ಮತ್ತು 4ನೇ ಹಂತದ 1–2 ಘಟ್ಟಗಳ ನೀರು ಸರಬರಾಜು ಘಟಕಗಳಲ್ಲಿ ಕ್ರಮವಾಗಿ 12 ಹಾಗೂ 6 ಗಂಟೆ ಕಾಮಗಾರಿ ನಡೆಯಲಿದೆ ಎಂದು ತಿಳಿಸಲಾಗಿದೆ.