‘ನೀರಿನ ಟ್ಯಾಂಕರ್ ಚಾಲಕನ ಅತೀ ವೇಗದ ಚಾಲನೆ ಹಾಗೂ ನಿರ್ಲಕ್ಷ್ಯದಿಂದ ಅಪಘಾತ ಸಂಭವಿಸಿರುವುದು ಮೇಲ್ನೋಟಕ್ಕೆ ಗೊತ್ತಾಗಿದೆ. ಹರೀಶ್ ಪತ್ನಿ ನೀಡಿರುವ ದೂರು ಆಧರಿಸಿ, ‘ಶ್ರೀ ಕೃಷ್ಣ ವಾಟರ್ ಟ್ಯಾಂಕರ್’ ಚಾಲಕನ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಅಪಘಾತದ ಬಳಿಕ ಟ್ಯಾಂಕರ್ ಸ್ಥಳದಲ್ಲೇ ಬಿಟ್ಟು ಚಾಲಕ ಪರಾರಿಯಾಗಿದ್ದಾನೆ’ ಎಂದು ಪೊಲೀಸರು ಹೇಳಿದರು.