<p><strong>ಹೆಸರಘಟ್ಟ:</strong> ಚಿಕ್ಕಬಾಣಾವರ ಗ್ರಾಮದ ದ್ವಾರಕಾ ನಗರದ ಪ್ರಾಥಮಿಕ ಆರೋಗ್ಯ ಕೇಂದ್ರದ ಮುಂದೆ ಇರುವ ಶುದ್ಧ ನೀರಿನ ಘಟಕವು ಒಂದು ತಿಂಗಳಿನಿಂದ ಸ್ಥಗಿತಗೊಂಡಿದೆ.</p>.<p>‘ದ್ವಾರಕಾ ನಗರದಲ್ಲಿ ಸುಮಾರು 150 ಮನೆಗಳಿವೆ. ಎಲ್ಲರೂ ಕುಡಿಯುವ ನೀರಿಗಾಗಿ ಈ ಘಟಕವನ್ನೇ ಅವಲಂಬಿಸಿದ್ದಾರೆ. ಈ ಘಟಕವನ್ನು ಬಿಟ್ಟರೆ ಸ್ಥಳೀಯರು ನೀರಿಗಾಗಿ ಮಾರುತಿ ನಗರ, ಇಲ್ಲವೇ ಕೆಂಪಾಪುರ ರಸ್ತೆಯಲ್ಲಿರುವ ಘಟಕದಿಂದ ನೀರನ್ನು ತೆಗೆದುಕೊಂಡು ಬರಬೇಕು. ದ್ವಿಚಕ್ರ ವಾಹನ ಉಳ್ಳವರು ಸಲೀಸಾಗಿ ತರುತ್ತಾರೆ. ಇಲ್ಲದವರು ನೀರಿಗಾಗಿ ಪರದಾಡಬೇಕಿದೆ’ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದರು.</p>.<p>‘ಪಂಚಾಯಿತಿ ಸದಸ್ಯರು ಇದುವರೆಗೆ ಗ್ರಾಮಸ್ಥರ ಸಮಸ್ಯೆಗಳ ಬಗ್ಗೆ ಕಾಳಜಿ ವಹಿಸಿಲ್ಲ. ಸಮಸ್ಯೆಯನ್ನು ಬಗೆಹರಿಸುವ ನಿಟ್ಟಿನಲ್ಲಿ ಯಾವ ಕ್ರಮವನ್ನು ತೆಗೆದುಕೊಂಡಿಲ್ಲ’ ಎಂದು ಗ್ರಾಮದ ನಿವಾಸಿ ಮಹೇಂದ್ರ ಅಸಮಾಧಾನ ವ್ಯಕ್ತಪಡಿಸಿದರು.</p>.<p>ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ರಾಮಕೃಷ್ಣ ಅವರು ಪ್ರತಿಕ್ರಿಯಿಸಿ, ‘ನೀರಿನ ನಿರ್ವಹಣೆ ಬಗ್ಗೆ ಚರ್ಚೆ ಮಾಡುತ್ತಿದ್ದು, ಶೀಘ್ರದಲ್ಲಿ ಈ ಸಮಸ್ಯೆಯನ್ನು ಬಗೆಹರಿಸುತ್ತೇವೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೆಸರಘಟ್ಟ:</strong> ಚಿಕ್ಕಬಾಣಾವರ ಗ್ರಾಮದ ದ್ವಾರಕಾ ನಗರದ ಪ್ರಾಥಮಿಕ ಆರೋಗ್ಯ ಕೇಂದ್ರದ ಮುಂದೆ ಇರುವ ಶುದ್ಧ ನೀರಿನ ಘಟಕವು ಒಂದು ತಿಂಗಳಿನಿಂದ ಸ್ಥಗಿತಗೊಂಡಿದೆ.</p>.<p>‘ದ್ವಾರಕಾ ನಗರದಲ್ಲಿ ಸುಮಾರು 150 ಮನೆಗಳಿವೆ. ಎಲ್ಲರೂ ಕುಡಿಯುವ ನೀರಿಗಾಗಿ ಈ ಘಟಕವನ್ನೇ ಅವಲಂಬಿಸಿದ್ದಾರೆ. ಈ ಘಟಕವನ್ನು ಬಿಟ್ಟರೆ ಸ್ಥಳೀಯರು ನೀರಿಗಾಗಿ ಮಾರುತಿ ನಗರ, ಇಲ್ಲವೇ ಕೆಂಪಾಪುರ ರಸ್ತೆಯಲ್ಲಿರುವ ಘಟಕದಿಂದ ನೀರನ್ನು ತೆಗೆದುಕೊಂಡು ಬರಬೇಕು. ದ್ವಿಚಕ್ರ ವಾಹನ ಉಳ್ಳವರು ಸಲೀಸಾಗಿ ತರುತ್ತಾರೆ. ಇಲ್ಲದವರು ನೀರಿಗಾಗಿ ಪರದಾಡಬೇಕಿದೆ’ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದರು.</p>.<p>‘ಪಂಚಾಯಿತಿ ಸದಸ್ಯರು ಇದುವರೆಗೆ ಗ್ರಾಮಸ್ಥರ ಸಮಸ್ಯೆಗಳ ಬಗ್ಗೆ ಕಾಳಜಿ ವಹಿಸಿಲ್ಲ. ಸಮಸ್ಯೆಯನ್ನು ಬಗೆಹರಿಸುವ ನಿಟ್ಟಿನಲ್ಲಿ ಯಾವ ಕ್ರಮವನ್ನು ತೆಗೆದುಕೊಂಡಿಲ್ಲ’ ಎಂದು ಗ್ರಾಮದ ನಿವಾಸಿ ಮಹೇಂದ್ರ ಅಸಮಾಧಾನ ವ್ಯಕ್ತಪಡಿಸಿದರು.</p>.<p>ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ರಾಮಕೃಷ್ಣ ಅವರು ಪ್ರತಿಕ್ರಿಯಿಸಿ, ‘ನೀರಿನ ನಿರ್ವಹಣೆ ಬಗ್ಗೆ ಚರ್ಚೆ ಮಾಡುತ್ತಿದ್ದು, ಶೀಘ್ರದಲ್ಲಿ ಈ ಸಮಸ್ಯೆಯನ್ನು ಬಗೆಹರಿಸುತ್ತೇವೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>