‘ಮುಷ್ಕರ ನಡೆಯುತ್ತಿದ್ದ ಸಂದರ್ಭವನ್ನು ಕೆಲವರು ದುರ್ಬಳಕೆ ಮಾಡಿಕೊಂಡಿದ್ದು, ಒಂದು ಟ್ಯಾಂಕರ್ ನೀರಿಗೆ ₹ 1 ಸಾವಿರದ ಬದಲು ₹5 ಸಾವಿರ ಪಡೆಯುತ್ತಿರುವುದು ಗಮನಕ್ಕೆ ಬಂದಿದೆ. ಈ ರೀತಿ ಸಾರ್ವಜನಿಕರಿಂದ ಆಗುವ ಸುಲಿಗೆ ತಪ್ಪಿಸಬೇಕಿದೆ. ನೀರಿಲ್ಲದೆ ಆಸ್ಪತ್ರೆಗಳಲ್ಲಿ ರೋಗಿಗಳಿಗೆ ಚಿಕಿತ್ಸೆಗೆ ತೊಂದರೆ ಉಂಟಾಗಿದೆ. ಇದನ್ನು ಗಮನಿಸಿ ಮುಷ್ಕರವನ್ನು ತಾತ್ಕಾಲಿಕವಾಗಿ ಹಿಂದಕ್ಕೆ ಪಡೆದಿದ್ದೇವೆ’ ಎಂದೂ ಅವರು ಹೇಳಿದರು.