‘ತಿದ್ದುಪಡಿ ಮಾಡಲಾದ ಕಾನೂನು ಜಾರಿಯಿಂದ ಆಗುವ ಪರಿಣಾಮಗಳ ಬಗ್ಗೆ ಆಲ್ ಇಂಡಿಯಾ ಮೋಟಾರ್ ಟ್ರಾನ್ಸ್ಪೋರ್ಟ್ ಕಾಂಗ್ರೆಸ್ (ಎಐಎಂಟಿಸಿ) ತಂಡವು ಕೇಂದ್ರ ಸರ್ಕಾರಕ್ಕೆ ಮನವರಿಕೆ ಮಾಡಿಸಿದೆ. ಗೃಹ ಸಚಿವಾಲಯದ ಕಾರ್ಯದರ್ಶಿ ಅವರ ನೇತೃತ್ವದಲ್ಲಿ ಸಭೆಯನ್ನೂ ನಡೆಸಲಾಗಿದ್ದು, ನಿಬಂಧನೆಗಳನ್ನು ವಿಧಿಸುವುದಿಲ್ಲವೆಂದು ಅವರು ಲಿಖಿತ ಭರವಸೆ ನೀಡಿದ್ದಾರೆ. ಆದರೆ, ಈಗ ಪಟ್ಟಭದ್ರ ಹಿತಾಸಕ್ತಿಗಳು ಆಧಾರ ರಹಿತ ವದಂತಿಗಳನ್ನು ಹರಡಿ, ಚಾಲಕರ ದಿಕ್ಕನ್ನು ತಪ್ಪಿಸಲು ಮುಂದಾಗಿದ್ದಾರೆ’ ಎಂದು ಆಕ್ರೋಶ ವ್ಯಕ್ತಪಡಿಸಿದರು.