ತುಮಕೂರು ಲೋಕಸಭಾ ಕ್ಷೇತ್ರದಲ್ಲಿ ಸ್ಪರ್ಧಿಸುವಂತೆ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ ಅವರಿಗೆ ಬಿಜೆಪಿ ಸಲಹೆ ನೀಡಿದೆ ಎಂಬ ವಿಚಾರ ಕುರಿತು ಪ್ರತಿಕ್ರಿಯಿಸಿದ ರಾಜಣ್ಣ, ‘ಯಾರನ್ನೂ ಸ್ಪರ್ಧಿಸದಂತೆ ನಿರ್ಬಂಧಿಸಲು ಆಗುವುದಿಲ್ಲ. ನಮ್ಮ ಅಭ್ಯರ್ಥಿಯ ಗೆಲುವಿಗೆ ಕಾರ್ಯತಂತ್ರ ರೂಪಿಸಿ, ಕೆಲಸ ಮಾಡುವುದು ಗೊತ್ತಿದೆ’ ಎಂದು ಹೇಳಿದರು.