ಬುಧವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಶರಾವತಿ ನದಿಯಿಂದ ನೀರು ತರಲು ₹12,500 ಕೋಟಿ ಖರ್ಚು ಮಾಡಲು ಸರ್ಕಾರ ಮುಂದಾಗಿದೆ. ಇದೇ ಹಣವನ್ನು ನಗರದ ಕಸ ವಿಲೇವಾರಿ, ಒಳಚರಂಡಿ ವ್ಯವಸ್ಥೆ ಅಭಿವೃದ್ಧಿ, ರಾಜಕಾಲುವೆಗಳ ಅಭಿವೃದ್ಧಿ, ಜಲಮೂಲಗಳಿಗೆ ತ್ಯಾಜ್ಯ ಸೇರದಂತೆ ತಡೆಯುವುದು ಹಾಗೂ ನೀರಿನ ಮಿತ ಬಳಕೆಗೆ ಬೇಕಾದ ಅಗತ್ಯ ಕ್ರಮಗಳಿಗೆ ಬಳಸಿದರೆ ನೀರಿನ ಬವಣೆಗೆ ಪರಿಹಾರ ಕಂಡುಕೊಳ್ಳಬಹುದು’ ಎಂದರು.