<p><strong>ಬೆಂಗಳೂರು:</strong> ‘ಬಡ, ಆದಿವಾಸಿಗಳ, ರೈತರ ಪರ ಧ್ವನಿಯೆತ್ತುವವರನ್ನು ನಗರದ ನಕ್ಸಲರು ಎಂದು ಕರೆಯುವುದಾದರೆ ನಾವೂ ನಗರದ ನಕ್ಸಲರೇ’ ಎಂದು ಸ್ವಾಮಿ ಅಗ್ನಿವೇಶ್ ಗುಡುಗಿದರು.<br /><br />ಪತ್ರಕರ್ತೆ ಗೌರಿ ಲಂಕೇಶ್ ಅವರ ಹತ್ಯೆ ನಡೆದು ಒಂದು ವರ್ಷ ಪೂರ್ಣಗೊಂಡ ಪ್ರಯುಕ್ತ ಗೌರಿ ಲಂಕೇಶ್ ಟ್ರಸ್ಟ್ ಮತ್ತು ಗೌರಿ ಬಳಗ ಬುಧವಾರ ನಗರದಲ್ಲಿ ಹಮ್ಮಿಕೊಂಡ ಗೌರಿ ದಿನ ಕಾರ್ಯಕ್ರಮದ ಅಂಗವಾಗಿ ರಾಜಭವನ ಚಲೋ ಕಾರ್ಯಕ್ರಮದ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು.</p>.<p>‘ಮಾನವ ಪರಿವಾರದವರು ಒಂದೇ. ನಮ್ಮ ಮಾತಿಗೆ ನೀವು ಗುಂಡಿನ ಮೂಲಕ ಪ್ರತಿಕ್ರಿಯಿಸುತ್ತೀರಾದರೆ ನಾವು ಮತದಾನದ ಮೂಲಕ (ಬ್ಯಾಲೆಟ್) ಉತ್ತರಿಸುತ್ತೇವೆ’ ಎಂದರು.<br /><br />‘ಸನಾತನ ಸಂಸ್ಥೆ ಸಾಮಾನ್ಯ ಧರ್ಮ ಪ್ರಚಾರಕ ಸಂಸ್ಥೆ ಅಲ್ಲ. ಅದು ಭಯೋತ್ಪಾದನಾ ಸಂಸ್ಥೆ. ಅದರ ಮೇಲೆ ಸರ್ಕಾರ ನಿಗಾ ಇಡಬೇಕು ಎಂದು ಆಶಿಸಿದ ಅವರು, ವಿಚಾರ ಸ್ವತಂತ್ರತೆ, ಅಭಿವ್ಯಕ್ತಿ ಸ್ವಾತಂತ್ರ್ಯದ ಮೇಲೆ ದಾಳಿ ಮಾಡುವವರನ್ನು ನಿಯಂತ್ರಿಸಬೇಕು’ ಎಂದರು.<br /><br />ಮಾತಿನುದ್ದಕ್ಕೂ ಪ್ರಧಾನಿ ನರೇಂದ್ರ ಮೋದಿ ಅವರನ್ನು ತರಾಟೆಗೆ ತೆಗೆದುಕೊಂಡ ಸ್ವಾಮೀಜಿ, ‘ಮೋದಿ ಅವರೊಬ್ಬ ಸಂಘ ಪ್ರಚಾರಕ. ಅವರನ್ನು ಗುಜರಾತ್ನ ಮುಖ್ಯಮಂತ್ರಿಯನ್ನಾಗಿ ಮಾಡಲಾಯಿತು. ಅವರು ಗುಜರಾತನ್ನು ತಮ್ಮ ಪ್ರಯೋಗಶಾಲೆಯನ್ನಾಗಿ ಮಾಡಿಕೊಂಡರು. ಮುಂದಿನ 15 ವರ್ಷಗಳ ಕಾಲ ಅವರು ಹೇಳಿದ್ದೇ ನಡೆಯಿತು. 4 ವರ್ಷಗಳಿಂದ ವಿಶ್ವವಿದ್ಯಾಲಯಗಳಿಂದ ಹಿಡಿದು ಎಲ್ಲ ಆಯಕಟ್ಟಿನ ಸ್ಥಳಗಳಲ್ಲಿ ಅವರ ಕಡೆಯವರೇ ಇದ್ದಾರೆ’ ಎಂದರು.<br /><br />‘ಆರ್ಎಸ್ಎಸ್ ಎಂದರೆ ಬಹುಮುಖಿ ರಾಕ್ಷಸ. ಬೇರೆ ಬೇರೆ ಹೆಸರುಗಳಲ್ಲಿ ಅದರ ಅಸ್ತಿತ್ವ ಇದೆ. ಅದರ ನಾಯಕ ಹಿಟ್ಲರ್. ಈ ಸಂಘಟನೆಯ ನಾಯಕರೆಲ್ಲಾ ಅದೇ ತತ್ವವನ್ನು ಪಾಲಿಸುವವರಾಗಿದ್ದಾರೆ. ಆರ್ಎಸ್ಎಸ್ನದ್ದು ರಾಜಕೀಯ ಹಿಂದುತ್ವ. ಹಿಂದೂಗಳ ಏಕತೆ ಬಗ್ಗೆ ಮಾತನಾಡುವ ಇವರಿಗೆ ದಾಬೋಲ್ಕರ್, ಗೋವಿಂದರಾವ್ ಪಾನ್ಸರೆ, ಪ್ರೊ.ಎಂ.ಎಂ.ಕಲಬುರ್ಗಿ ಅವರು ಹಿಂದೂಗಳಾಗಿ ಕಾಣಲಿಲ್ಲವೇ’ ಎಂದು ಪ್ರಶ್ನಿಸಿದರು.<br /><br />‘ಆರ್ಎಸ್ಎಸ್ನ ಬಹುಮುಖಿ ಸಂಸ್ಥೆಗಳಲ್ಲಿ ಸನಾತನ ಸಂಸ್ಥೆಯೂ ಒಂದು. ಅದು ನೈಜ ಹಿಂದೂಗಳ ವಿರೋಧಿ. ಯಾರು ವೇದ, ಉಪನಿಷತ್ತುಗಳನ್ನು ಪಾಲಿಸುತ್ತಾರೋ ಅಂಥವರನ್ನು ಸಹಿಸುವುದಿಲ್ಲ’ ಎಂದರು.<br />ನಮ್ಮದು ಶಸ್ತ್ರಾಸ್ತ್ರ ಪರಂಪರೆ ಅಲ್ಲ. ಅದರಿಂದ ದೂರ ಇದ್ದು ಸೈದ್ಧಾಂತಿಕವಾಗಿ ಹೋರಾಡುತ್ತೇವೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ‘ಬಡ, ಆದಿವಾಸಿಗಳ, ರೈತರ ಪರ ಧ್ವನಿಯೆತ್ತುವವರನ್ನು ನಗರದ ನಕ್ಸಲರು ಎಂದು ಕರೆಯುವುದಾದರೆ ನಾವೂ ನಗರದ ನಕ್ಸಲರೇ’ ಎಂದು ಸ್ವಾಮಿ ಅಗ್ನಿವೇಶ್ ಗುಡುಗಿದರು.<br /><br />ಪತ್ರಕರ್ತೆ ಗೌರಿ ಲಂಕೇಶ್ ಅವರ ಹತ್ಯೆ ನಡೆದು ಒಂದು ವರ್ಷ ಪೂರ್ಣಗೊಂಡ ಪ್ರಯುಕ್ತ ಗೌರಿ ಲಂಕೇಶ್ ಟ್ರಸ್ಟ್ ಮತ್ತು ಗೌರಿ ಬಳಗ ಬುಧವಾರ ನಗರದಲ್ಲಿ ಹಮ್ಮಿಕೊಂಡ ಗೌರಿ ದಿನ ಕಾರ್ಯಕ್ರಮದ ಅಂಗವಾಗಿ ರಾಜಭವನ ಚಲೋ ಕಾರ್ಯಕ್ರಮದ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು.</p>.<p>‘ಮಾನವ ಪರಿವಾರದವರು ಒಂದೇ. ನಮ್ಮ ಮಾತಿಗೆ ನೀವು ಗುಂಡಿನ ಮೂಲಕ ಪ್ರತಿಕ್ರಿಯಿಸುತ್ತೀರಾದರೆ ನಾವು ಮತದಾನದ ಮೂಲಕ (ಬ್ಯಾಲೆಟ್) ಉತ್ತರಿಸುತ್ತೇವೆ’ ಎಂದರು.<br /><br />‘ಸನಾತನ ಸಂಸ್ಥೆ ಸಾಮಾನ್ಯ ಧರ್ಮ ಪ್ರಚಾರಕ ಸಂಸ್ಥೆ ಅಲ್ಲ. ಅದು ಭಯೋತ್ಪಾದನಾ ಸಂಸ್ಥೆ. ಅದರ ಮೇಲೆ ಸರ್ಕಾರ ನಿಗಾ ಇಡಬೇಕು ಎಂದು ಆಶಿಸಿದ ಅವರು, ವಿಚಾರ ಸ್ವತಂತ್ರತೆ, ಅಭಿವ್ಯಕ್ತಿ ಸ್ವಾತಂತ್ರ್ಯದ ಮೇಲೆ ದಾಳಿ ಮಾಡುವವರನ್ನು ನಿಯಂತ್ರಿಸಬೇಕು’ ಎಂದರು.<br /><br />ಮಾತಿನುದ್ದಕ್ಕೂ ಪ್ರಧಾನಿ ನರೇಂದ್ರ ಮೋದಿ ಅವರನ್ನು ತರಾಟೆಗೆ ತೆಗೆದುಕೊಂಡ ಸ್ವಾಮೀಜಿ, ‘ಮೋದಿ ಅವರೊಬ್ಬ ಸಂಘ ಪ್ರಚಾರಕ. ಅವರನ್ನು ಗುಜರಾತ್ನ ಮುಖ್ಯಮಂತ್ರಿಯನ್ನಾಗಿ ಮಾಡಲಾಯಿತು. ಅವರು ಗುಜರಾತನ್ನು ತಮ್ಮ ಪ್ರಯೋಗಶಾಲೆಯನ್ನಾಗಿ ಮಾಡಿಕೊಂಡರು. ಮುಂದಿನ 15 ವರ್ಷಗಳ ಕಾಲ ಅವರು ಹೇಳಿದ್ದೇ ನಡೆಯಿತು. 4 ವರ್ಷಗಳಿಂದ ವಿಶ್ವವಿದ್ಯಾಲಯಗಳಿಂದ ಹಿಡಿದು ಎಲ್ಲ ಆಯಕಟ್ಟಿನ ಸ್ಥಳಗಳಲ್ಲಿ ಅವರ ಕಡೆಯವರೇ ಇದ್ದಾರೆ’ ಎಂದರು.<br /><br />‘ಆರ್ಎಸ್ಎಸ್ ಎಂದರೆ ಬಹುಮುಖಿ ರಾಕ್ಷಸ. ಬೇರೆ ಬೇರೆ ಹೆಸರುಗಳಲ್ಲಿ ಅದರ ಅಸ್ತಿತ್ವ ಇದೆ. ಅದರ ನಾಯಕ ಹಿಟ್ಲರ್. ಈ ಸಂಘಟನೆಯ ನಾಯಕರೆಲ್ಲಾ ಅದೇ ತತ್ವವನ್ನು ಪಾಲಿಸುವವರಾಗಿದ್ದಾರೆ. ಆರ್ಎಸ್ಎಸ್ನದ್ದು ರಾಜಕೀಯ ಹಿಂದುತ್ವ. ಹಿಂದೂಗಳ ಏಕತೆ ಬಗ್ಗೆ ಮಾತನಾಡುವ ಇವರಿಗೆ ದಾಬೋಲ್ಕರ್, ಗೋವಿಂದರಾವ್ ಪಾನ್ಸರೆ, ಪ್ರೊ.ಎಂ.ಎಂ.ಕಲಬುರ್ಗಿ ಅವರು ಹಿಂದೂಗಳಾಗಿ ಕಾಣಲಿಲ್ಲವೇ’ ಎಂದು ಪ್ರಶ್ನಿಸಿದರು.<br /><br />‘ಆರ್ಎಸ್ಎಸ್ನ ಬಹುಮುಖಿ ಸಂಸ್ಥೆಗಳಲ್ಲಿ ಸನಾತನ ಸಂಸ್ಥೆಯೂ ಒಂದು. ಅದು ನೈಜ ಹಿಂದೂಗಳ ವಿರೋಧಿ. ಯಾರು ವೇದ, ಉಪನಿಷತ್ತುಗಳನ್ನು ಪಾಲಿಸುತ್ತಾರೋ ಅಂಥವರನ್ನು ಸಹಿಸುವುದಿಲ್ಲ’ ಎಂದರು.<br />ನಮ್ಮದು ಶಸ್ತ್ರಾಸ್ತ್ರ ಪರಂಪರೆ ಅಲ್ಲ. ಅದರಿಂದ ದೂರ ಇದ್ದು ಸೈದ್ಧಾಂತಿಕವಾಗಿ ಹೋರಾಡುತ್ತೇವೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>