ಬೆಂಗಳೂರು: ಸತತ ಮೂರನೇ ಸರ್ಕಾರಿ ಸಾರಿಗೆ ನೌಕರರ ಮುಷ್ಕರ ಮುಂದುವರಿದಿದೆ. ಬೆಂಗಳೂರಿನ ಸ್ಯಾಟಲೈಟ್ ಬಸ್ ನಿಲ್ದಾಣದಕ್ಕೆ ಬಂದಿರುವ ಕೆಲವೇ ಕೆಲವು ಸರ್ಕಾರಿ ಮತ್ತು ಖಾಸಗಿ ಬಸ್ಗಳಿಗೂ ಪ್ರಯಾಣಿಕರ ಕೊರತೆ ಕಾಡುತ್ತಿದೆ. ಹೀಗಾಗಿ, ಖಾಸಗಿ ಬಸ್ ಹಾಗೂ ಸರ್ಕಾರಿ ಸಿಬ್ಬಂದಿಗಳ ನಡುವೆ ಮಾತಿನ ಚಕಮಕಿ ನಡೆದಿದೆ. ಸರ್ಕಾರಿ ಬಸ್ ಗಳನ್ನು ಓಡಿಸಲು ಬಿಡುವುದಿಲ್ಲ ಎಂದು ಖಾಸಗಿ ಬಸ್ ಸಿಬ್ಬಂದಿ ಜಗಳ ತೆಗೆದಿದ್ದಾರೆ.