‘ರಾಜರಾಜೇಶ್ವರಿ ನಗರ ಠಾಣಾ ವ್ಯಾಪ್ತಿಯ ಸಿದ್ಧಲಿಂಗಯ್ಯ ಉದ್ಯಾನದ ಬಳಿ ಆರೋಪಿ ಬೈಕ್ನಲ್ಲಿ ಅನುಮಾನಾಸ್ಪದವಾಗಿ ಓಡಾಡುತ್ತಿದ್ದ. ಪೊಲೀಸರು ಈತನನ್ನು ತಡೆದು ತಪಾಸಣೆ ನಡೆಸಿದಾಗ ಪ್ಲಾಸ್ಟಿಕ್ ಚೀಲದಲ್ಲಿ ಲಾಂಗ್, ಚೂರಿ ಹಾಗೂ ಮೊಬೈಲ್ಗಳು ಪತ್ತೆಯಾಗಿದ್ದವು. ಕೂಡಲೇ ಆರೋಪಿಯನ್ನು ಬಂಧಿಸಿ, ಮಾರಕಾಸ್ತ್ರಗಳನ್ನು ಜಪ್ತಿ ಮಾಡಲಾಯಿತು’ ಎಂದು ಪೊಲೀಸರು ತಿಳಿಸಿದರು.