ಬೆಂಗಳೂರು: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗುವ ಸಾಧ್ಯತೆ ಇದ್ದು, ರಾಜ್ಯದ ಅಲ್ಲಲ್ಲಿ ಮಳೆಯಾಗುವ ಸಾಧ್ಯತೆ ಇದೆ.
‘ದಕ್ಷಿಣ ಒಳನಾಡಿನಲ್ಲಿ ಡಿ.1ರವರೆಗೆ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನಲ್ಲಿ ನ.29ರವರೆಗೆ ಮಳೆಯಾಗಲಿದ್ದು, ನ.30 ಮತ್ತು ಡಿ.1ರಂದು ಒಣಹವೆ ನಿರೀಕ್ಷಿಸಲಾಗಿದೆ’ ಎಂದು ಹವಾಮಾನ ಇಲಾಖೆ ನಿರ್ದೇಶಕ ಸಿ.ಎಸ್.ಪಾಟೀಲ ತಿಳಿಸಿದರು.
‘ಕರಾವಳಿಯಲ್ಲಿ ಶನಿವಾರ ಅಲ್ಲಲ್ಲಿ ಹಗುರ ಮಳೆಯಾಗಲಿದ್ದು, ನ.29ರಿಂದ ಡಿ.1ರವರೆಗೆ ಒಣಹವೆ ನಿರೀಕ್ಷಿಸಲಾಗಿದೆ. ಬೆಂಗಳೂರಿನಲ್ಲಿ ಕೆಲವೆಡೆ ಹಗುರ ಮಳೆಯಾಗುವ ಮತ್ತು ಮುಂಜಾನೆ ಮಂಜು ಬೀಳುವ ಸಾಧ್ಯತೆ ಇದೆ’ ಎಂದು ವಿವರಿಸಿದರು.