ಬೆಂಗಳೂರು: ‘ನಿವಾರ್’ ಚಂಡಮಾರುತದ ಪ್ರಭಾವದಿಂದ ಶುರುವಾಗಿರುವ ಮಳೆ ಬೆಂಗಳೂರಿನಲ್ಲಿ ಶುಕ್ರವಾರವೂ ಮುಂದುವರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ ಮತ್ತು ಮಂಡ್ಯ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ನಿರೀಕ್ಷೆಯಿಂದ ಗುರುವಾರ ಯೆಲ್ಲೋ ಅಲರ್ಟ್ ಘೋಷಿಸಲಾಗಿತ್ತು.
‘ಚಂಡಮಾರುತವು ಪುದುಚೇರಿ ದಾಟಿದ ನಂತದ ದುರ್ಬಲಗೊಂಡಿರುವ ಕಾರಣ ತೀವ್ರತೆ ಕಡಿಯಾಗುವ ನಿರೀಕ್ಷೆ ಇದೆ. ಆದರೂ ದಕ್ಷಿಣ ಒಳನಾಡು, ಉತ್ತರ ಒಳನಾಡು ಮತ್ತು ಕರಾವಳಿ ಜಿಲ್ಲೆಗಳ ಅಲ್ಲಲ್ಲಿ ಶ್ರುಕ್ರವಾರ ಮಳೆಯಾಗಲಿದೆ’ ಎಂದು ಹವಾಮಾನ ಇಲಾಖೆ ನಿರ್ದೇಶಕ ಸಿ.ಎಸ್.ಪಾಟೀಲ ತಿಳಿಸಿದರು.