ಬೆಂಗಳೂರು: ಉತ್ತರ ಒಳನಾಡಿನ ಕೆಲವೆಡೆ ಸೋಮವಾರ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಒಣ ಹವೆ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಇರಲಿದೆ. ಇದೇ 19ರಿಂದ ಐದು ದಿನಗಳು ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಸಾಧಾರಣ, ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಇದೇ 20ರಂದು ಗುಡುಗು ಸಹಿತ ಸಾಧಾರಣ ಮಳೆ ಆಗಬಹುದು ಎಂದು ಇಲಾಖೆ ಹೇಳಿದೆ.
ಭಾನುವಾರ ಕೊಪ್ಪಳದಲ್ಲಿ ಗರಿಷ್ಠ ಉಷ್ಣಾಂಶ (39.5 ಡಿಗ್ರಿ ಸೆಲ್ಸಿಯಸ್) ಹಾಗೂ ಶಿವಮೊಗ್ಗದಲ್ಲಿ ಕನಿಷ್ಠ ಉಷ್ಣಾಂಶ (19 ಡಿಗ್ರಿ ಸೆಲ್ಸಿಯಸ್ ) ದಾಖಲಾಗಿದೆ.