<p>ಬೆಂಗಳೂರು:‘ಮಲ ಸ್ವಚ್ಛತೆಗೆ ಅತ್ಯಾಧುನಿಕ ಯಂತ್ರೋಪಕರಣಗಳನ್ನು ಬಳಕೆ ಮಾಡಿದರೆ, ಮಲದ ಗುಂಡಿಗೆ ಇಳಿದು ಪ್ರಾಣ ಕಳೆದುಕೊಳ್ಳುತ್ತಿರುವವರ ಪ್ರಮಾಣ ಕ್ರಮೇಣ ಕಡಿಮೆಯಾಗಲಿದೆ. ಆದರೆ, ಸರ್ಕಾರಗಳು ಇದಕ್ಕೆ ಸಿದ್ಧವಿಲ್ಲ’ ರಾಜ್ಯಸಭಾ ಸದಸ್ಯ ಎಲ್.ಹನುಮಂತಯ್ಯ ಎಂದು ಬೇಸರ ವ್ಯಕ್ತಪಡಿಸಿದರು.</p>.<p>ಬಂಡಾಯ ಸಾಹಿತ್ಯ ಸಂಘಟನೆ ಹಾಗೂ ದಲಿತ ಹಕ್ಕುಗಳ ಸಮಿತಿ ಸಹಯೋಗದಲ್ಲಿ ಶನಿವಾರ ಆಯೋಜಿಸಿದ್ದ ‘ಕೊರೊನಾ ಕಂಬನಿಯ ಕುಯಿಲು’ ಸರಣಿಯಲ್ಲಿ ದಲಿತರ ಸ್ಥಿತಿಗತಿ ಕುರಿತು ಮಾತನಾಡಿದರು.</p>.<p>‘ಮಲಸ್ವಚ್ಛಗೊಳಿಸುವವರು ಪ್ರತಿ ಬಾರಿ ಪ್ರಾಣ ಕಳೆದುಕೊಂಡಾಗಲೂ ಆ ವಿಚಾರವನ್ನು ಸರ್ಕಾರಗಳ ಮುಂದೆ ಇಡುತ್ತೇನೆ. ಆದರೆ, ಮುಂದೇನು ಮಾಡುವುದು? ಎಂದು ನನಗೇ ಮರುಪ್ರಶ್ನೆ ಮಾಡುತ್ತಾರೆ’ ಎಂದರು.</p>.<p>‘ಕೋವಿಡ್ನಿಂದ ಕೆಲಸ ಕಳೆದುಕೊಂಡಿರುವ ಅನೇಕರು ಹಳ್ಳಿಗಳತ್ತ ತೆರಳಿದ್ದಾರೆ. ಈ ವೇಳೆ ಎಲ್ಲ ರೀತಿಯ ಅಭಿವೃದ್ಧಿ ಕೆಲಸ ನಿಲ್ಲಿಸಿ, ಗ್ರಾಮೀಣ ಭಾಗಗಳಲ್ಲಿ ಉದ್ಯೋಗ ಸೃಷ್ಟಿಸಬೇಕು. ಇದರಿಂದ ನಗರದತ್ತ ವಲಸೆ ನಿಯಂತ್ರಣಕ್ಕೆ ಬರಲಿದೆ. ಪೋಲಿಯೊ ಲಸಿಕೆ ಮಾದರಿ ಕೋವಿಡ್ ಲಸಿಕೆಯನ್ನೂ ಮನೆ ಮನೆಗೆ ತೆರಳಿ ಹಾಕಬೇಕು’ ಎಂದರು.</p>.<p>ದಲಿತ ಸಂಘರ್ಷ ಸಮಿತಿಯ(ಅಂಬೇಡ್ಕರ್ ವಾದ) ಸಂಚಾಲಕ ಮಾವಳ್ಳಿ ಶಂಕರ್,‘ರಾಮನಗರದ ಮ್ಯಾನ್ಹೋಲ್ ದುರಂತದಲ್ಲಿ ಮೂವರು ಮೃತಪಟ್ಟ ಘಟನೆ ಖಂಡನೀಯ. ಇಷ್ಟೆಲ್ಲಾ ಆಧುನಿಕ ತಂತ್ರಜ್ಞಾನಗಳು ಬಂದರೂ ಇದೇ ಸ್ಥಿತಿ ಮುಂದುವರಿದಿದೆ. ವಿಶ್ವಗುರುವಾದ ಮೋದಿ ಅವರು ಏನು ಮಾಡುತ್ತಿದ್ದಾರೋ ತಿಳಿಯುತ್ತಿಲ್ಲ’ ಎಂದು ವ್ಯಂಗ್ಯವಾಡಿದರು.</p>.<p>ದಲಿತ ಹಕ್ಕುಗಳ ಸಮಿತಿಯ ಯು.ಬಸವರಾಜ,‘ಕೊರೊನಾ ಪರಿಸ್ಥಿತಿ ನಿಯಂತ್ರಣಕ್ಕೆ ಬರುವವರೆಗೆ ಸರ್ಕಾರ ಬಡವರು ಹಾಗೂ ದಲಿತರಿಗೆ ತಿಂಗಳಿಗೆ ₹10 ಸಾವಿರ ಸಹಾಯಧನ ವಿತರಿಸಬೇಕು’ ಎಂದು ಆಗ್ರಹಿಸಿದರು.</p>.<p>ಸಾಹಿತಿ ಬರಗೂರು ರಾಮಚಂದ್ರಪ್ಪ ಹಾಗೂ ಇತರರು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಂಗಳೂರು:‘ಮಲ ಸ್ವಚ್ಛತೆಗೆ ಅತ್ಯಾಧುನಿಕ ಯಂತ್ರೋಪಕರಣಗಳನ್ನು ಬಳಕೆ ಮಾಡಿದರೆ, ಮಲದ ಗುಂಡಿಗೆ ಇಳಿದು ಪ್ರಾಣ ಕಳೆದುಕೊಳ್ಳುತ್ತಿರುವವರ ಪ್ರಮಾಣ ಕ್ರಮೇಣ ಕಡಿಮೆಯಾಗಲಿದೆ. ಆದರೆ, ಸರ್ಕಾರಗಳು ಇದಕ್ಕೆ ಸಿದ್ಧವಿಲ್ಲ’ ರಾಜ್ಯಸಭಾ ಸದಸ್ಯ ಎಲ್.ಹನುಮಂತಯ್ಯ ಎಂದು ಬೇಸರ ವ್ಯಕ್ತಪಡಿಸಿದರು.</p>.<p>ಬಂಡಾಯ ಸಾಹಿತ್ಯ ಸಂಘಟನೆ ಹಾಗೂ ದಲಿತ ಹಕ್ಕುಗಳ ಸಮಿತಿ ಸಹಯೋಗದಲ್ಲಿ ಶನಿವಾರ ಆಯೋಜಿಸಿದ್ದ ‘ಕೊರೊನಾ ಕಂಬನಿಯ ಕುಯಿಲು’ ಸರಣಿಯಲ್ಲಿ ದಲಿತರ ಸ್ಥಿತಿಗತಿ ಕುರಿತು ಮಾತನಾಡಿದರು.</p>.<p>‘ಮಲಸ್ವಚ್ಛಗೊಳಿಸುವವರು ಪ್ರತಿ ಬಾರಿ ಪ್ರಾಣ ಕಳೆದುಕೊಂಡಾಗಲೂ ಆ ವಿಚಾರವನ್ನು ಸರ್ಕಾರಗಳ ಮುಂದೆ ಇಡುತ್ತೇನೆ. ಆದರೆ, ಮುಂದೇನು ಮಾಡುವುದು? ಎಂದು ನನಗೇ ಮರುಪ್ರಶ್ನೆ ಮಾಡುತ್ತಾರೆ’ ಎಂದರು.</p>.<p>‘ಕೋವಿಡ್ನಿಂದ ಕೆಲಸ ಕಳೆದುಕೊಂಡಿರುವ ಅನೇಕರು ಹಳ್ಳಿಗಳತ್ತ ತೆರಳಿದ್ದಾರೆ. ಈ ವೇಳೆ ಎಲ್ಲ ರೀತಿಯ ಅಭಿವೃದ್ಧಿ ಕೆಲಸ ನಿಲ್ಲಿಸಿ, ಗ್ರಾಮೀಣ ಭಾಗಗಳಲ್ಲಿ ಉದ್ಯೋಗ ಸೃಷ್ಟಿಸಬೇಕು. ಇದರಿಂದ ನಗರದತ್ತ ವಲಸೆ ನಿಯಂತ್ರಣಕ್ಕೆ ಬರಲಿದೆ. ಪೋಲಿಯೊ ಲಸಿಕೆ ಮಾದರಿ ಕೋವಿಡ್ ಲಸಿಕೆಯನ್ನೂ ಮನೆ ಮನೆಗೆ ತೆರಳಿ ಹಾಕಬೇಕು’ ಎಂದರು.</p>.<p>ದಲಿತ ಸಂಘರ್ಷ ಸಮಿತಿಯ(ಅಂಬೇಡ್ಕರ್ ವಾದ) ಸಂಚಾಲಕ ಮಾವಳ್ಳಿ ಶಂಕರ್,‘ರಾಮನಗರದ ಮ್ಯಾನ್ಹೋಲ್ ದುರಂತದಲ್ಲಿ ಮೂವರು ಮೃತಪಟ್ಟ ಘಟನೆ ಖಂಡನೀಯ. ಇಷ್ಟೆಲ್ಲಾ ಆಧುನಿಕ ತಂತ್ರಜ್ಞಾನಗಳು ಬಂದರೂ ಇದೇ ಸ್ಥಿತಿ ಮುಂದುವರಿದಿದೆ. ವಿಶ್ವಗುರುವಾದ ಮೋದಿ ಅವರು ಏನು ಮಾಡುತ್ತಿದ್ದಾರೋ ತಿಳಿಯುತ್ತಿಲ್ಲ’ ಎಂದು ವ್ಯಂಗ್ಯವಾಡಿದರು.</p>.<p>ದಲಿತ ಹಕ್ಕುಗಳ ಸಮಿತಿಯ ಯು.ಬಸವರಾಜ,‘ಕೊರೊನಾ ಪರಿಸ್ಥಿತಿ ನಿಯಂತ್ರಣಕ್ಕೆ ಬರುವವರೆಗೆ ಸರ್ಕಾರ ಬಡವರು ಹಾಗೂ ದಲಿತರಿಗೆ ತಿಂಗಳಿಗೆ ₹10 ಸಾವಿರ ಸಹಾಯಧನ ವಿತರಿಸಬೇಕು’ ಎಂದು ಆಗ್ರಹಿಸಿದರು.</p>.<p>ಸಾಹಿತಿ ಬರಗೂರು ರಾಮಚಂದ್ರಪ್ಪ ಹಾಗೂ ಇತರರು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>