‘ಸಮುದಾಯದ ವೈದ್ಯರು ಸೇರಿದಂತೆ ವಿವಿಧ ವೃತ್ತಿಪರರು, ಉದ್ಯಮಿಗಳ ಪ್ರತ್ಯೇಕ ಸಮಿತಿಗಳನ್ನು ರಚಿಸಲಾಗುವುದು. ರಿಯಾಯಿತಿ ದರದಲ್ಲಿ ವೈದ್ಯಕೀಯ ಸೌಲಭ್ಯ ಹಾಗೂ ಹೊಸ ಉದ್ದಿಮೆ ಸ್ಥಾಪಿಸಲು ಇಚ್ಛಿಸುವ ಸಮಾಜದ ಉತ್ಸಾಹಿ ಯುವ ಉದ್ದಿಮೆದಾರರಿಗೆ ಅಗತ್ಯ ಮಾರ್ಗದರ್ಶನ ನೀಡಲಾಗುವುದು. ಈ ಬಗ್ಗೆ ಮುಂದಿನ ದಿನಗಳಲ್ಲಿ ಯೋಜನೆ ಜಾರಿಗೊಳಿಸಲಾಗುವುದು.ಮಹಾಸಭೆಯ ವಿವಿಧ ಚಟುವಟಿಕೆಗಳಿಗೆ ಆರ್ಥಿಕವಾಗಿ ನೆರವಾಗಲು ಸಮುದಾಯದ ಅನೇಕರು ಮುಂದೆ ಬಂದಿದ್ದಾರೆ. ಈಗಾಗಲೇ ₹ 25 ಲಕ್ಷ ಭರವಸೆ ದಾನಿಗಳಿಂದ ದೊರಕಿದೆ’ ಎಂದರು.