<p><strong>ಬೆಂಗಳೂರು:</strong> ಪುತ್ರಿಯ ಮದುವೆಗೆಂದು ಮಾಡಿದ್ದ ಸಾಲ ತೀರಿಸಲು ಕೆಲಸಕ್ಕಿದ್ದ ಮನೆಯಲ್ಲಿ ಚಿನ್ನಾಭರಣ ಕಳ್ಳತನ ಮಾಡಿದ್ದ ಮಹಿಳೆಯನ್ನು ಜೆ.ಪಿ. ನಗರ ಠಾಣೆಯ ಪೊಲೀಸರು ಬಂಧಿಸಿದ್ದಾರೆ.</p>.<p>ಶಾಂತಿ ಅಲಿಯಾಸ್ ಶಾಂತಮ್ಮ ಬಂಧಿತ ಆರೋಪಿ.</p>.<p>ಜೆ.ಪಿ. ನಗರದ ಎರಡನೇ ಹಂತದ ನಿವಾಸಿ, ಶಿಕ್ಷಕಿ ಆಯಿಷಾ ಅವರು ನೀಡಿದ ದೂರಿನ ಮೇರೆಗೆ ಆರೋಪಿಯನ್ನು ಬಂಧಿಸಿ ಜೈಲಿಗೆ ಕಳುಹಿಸಲಾಗಿದೆ ಎಂದು ಪೊಲೀಸರು ಹೇಳಿದರು.</p>.<p>ಆರೋಪಿಯಿಂದ ₹14.30 ಲಕ್ಷ ಮೌಲ್ಯದ 143 ಗ್ರಾಂ ಚಿನ್ನಾಭರಣ ಜಪ್ತಿ ಮಾಡಲಾಗಿದೆ.</p>.<p>‘ಆಯಿಷಾ ಅವರು ಜನವರಿಯಲ್ಲಿ ಸಂಬಂಧಿಕರ ಮದುವೆಗೆಂದು ಚಿನ್ನಾಭರಣ ಧರಿಸಿ ಹೋಗಿದ್ದರು. ವಾಪಸ್ ಬಂದು, ನಾಲ್ಕು ಬಂಗಾರದ ಬಳೆಗಳು ಹಾಗೂ ಒಂದು ಬಂಗಾರದ ಸರವನ್ನು ಬೀರುವಿನಲ್ಲಿ ಇಟ್ಟಿದ್ದರು. ಮೇ 17ರಂದು ಮತ್ತೊಂದು ಮದುವೆ ಸಮಾರಂಭ ಇತ್ತು. ಆ ಮದುವೆ ಸಮಾರಂಭಕ್ಕಾಗಿ ಚಿನ್ನಾಭರಣ ಧರಿಸಿಕೊಳ್ಳಲು ಬೀರು ತೆರೆದಿದ್ದರು. ಆಗ ಚಿನ್ನಾಭರಣ ಕಳ್ಳತನ ಆಗಿರುವುದು ಗೊತ್ತಾಗಿತ್ತು’ ಎಂದು ಪೊಲೀಸರು ಹೇಳಿದರು.</p>.<p>‘ಮನೆಯಲ್ಲಿ ಕೆಲಸಕ್ಕೆ ನೇಮಿಸಿಕೊಂಡಿದ್ದ ಶಾಂತಿ ಮೇಲೆ ಅನುಮಾನ ವ್ಯಕ್ತಪಡಿಸಿ ಆಯಿಷಾ ದೂರು ನೀಡಿದ್ದರು. ಆಕೆಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಕಳ್ಳತನ ಮಾಡಿರುವುದು ಗೊತ್ತಾಗಿತ್ತು’ ಎಂದು ಪೊಲೀಸರು ಹೇಳಿದರು.</p>.<p>‘ಪುತ್ರಿಯ ಮದುವೆಗೆಂದು ಆರೋಪಿ ₹5 ಲಕ್ಷ ಸಾಲ ಮಾಡಿದ್ದಳು. ಅದನ್ನು ತೀರಿಸಲು ಕೆಲಸಕ್ಕಿದ್ದ ಮನೆಯಲ್ಲಿ ಚಿನ್ನಾಭರಣ ಕಳ್ಳತನ ಮಾಡಿದ್ದಳು ಎಂಬುದು ತನಿಖೆಯಿಂದ ಗೊತ್ತಾಗಿದೆ’ ಎಂದು ಪೊಲೀಸರು ಹೇಳಿದರು.</p>.<p>ಕಳ್ಳತನ ಮಾಡಿದ್ದ ಚಿನ್ನವನ್ನು ಕೋಣನಕುಂಟೆ ಹಾಗೂ ಮೈಕೊ ಲೇಔಟ್ನ ಚಿನ್ನಾಭರಣ ಅಂಗಡಿಗೆ ಆರೋಪಿ ಮಾರಾಟ ಮಾಡಿದ್ದಳು. ಆ ಚಿನ್ನವನ್ನು ಜಪ್ತಿ ಮಾಡಿಕೊಳ್ಳಲಾಗಿದೆ ಎಂದು ಪೊಲೀಸರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಪುತ್ರಿಯ ಮದುವೆಗೆಂದು ಮಾಡಿದ್ದ ಸಾಲ ತೀರಿಸಲು ಕೆಲಸಕ್ಕಿದ್ದ ಮನೆಯಲ್ಲಿ ಚಿನ್ನಾಭರಣ ಕಳ್ಳತನ ಮಾಡಿದ್ದ ಮಹಿಳೆಯನ್ನು ಜೆ.ಪಿ. ನಗರ ಠಾಣೆಯ ಪೊಲೀಸರು ಬಂಧಿಸಿದ್ದಾರೆ.</p>.<p>ಶಾಂತಿ ಅಲಿಯಾಸ್ ಶಾಂತಮ್ಮ ಬಂಧಿತ ಆರೋಪಿ.</p>.<p>ಜೆ.ಪಿ. ನಗರದ ಎರಡನೇ ಹಂತದ ನಿವಾಸಿ, ಶಿಕ್ಷಕಿ ಆಯಿಷಾ ಅವರು ನೀಡಿದ ದೂರಿನ ಮೇರೆಗೆ ಆರೋಪಿಯನ್ನು ಬಂಧಿಸಿ ಜೈಲಿಗೆ ಕಳುಹಿಸಲಾಗಿದೆ ಎಂದು ಪೊಲೀಸರು ಹೇಳಿದರು.</p>.<p>ಆರೋಪಿಯಿಂದ ₹14.30 ಲಕ್ಷ ಮೌಲ್ಯದ 143 ಗ್ರಾಂ ಚಿನ್ನಾಭರಣ ಜಪ್ತಿ ಮಾಡಲಾಗಿದೆ.</p>.<p>‘ಆಯಿಷಾ ಅವರು ಜನವರಿಯಲ್ಲಿ ಸಂಬಂಧಿಕರ ಮದುವೆಗೆಂದು ಚಿನ್ನಾಭರಣ ಧರಿಸಿ ಹೋಗಿದ್ದರು. ವಾಪಸ್ ಬಂದು, ನಾಲ್ಕು ಬಂಗಾರದ ಬಳೆಗಳು ಹಾಗೂ ಒಂದು ಬಂಗಾರದ ಸರವನ್ನು ಬೀರುವಿನಲ್ಲಿ ಇಟ್ಟಿದ್ದರು. ಮೇ 17ರಂದು ಮತ್ತೊಂದು ಮದುವೆ ಸಮಾರಂಭ ಇತ್ತು. ಆ ಮದುವೆ ಸಮಾರಂಭಕ್ಕಾಗಿ ಚಿನ್ನಾಭರಣ ಧರಿಸಿಕೊಳ್ಳಲು ಬೀರು ತೆರೆದಿದ್ದರು. ಆಗ ಚಿನ್ನಾಭರಣ ಕಳ್ಳತನ ಆಗಿರುವುದು ಗೊತ್ತಾಗಿತ್ತು’ ಎಂದು ಪೊಲೀಸರು ಹೇಳಿದರು.</p>.<p>‘ಮನೆಯಲ್ಲಿ ಕೆಲಸಕ್ಕೆ ನೇಮಿಸಿಕೊಂಡಿದ್ದ ಶಾಂತಿ ಮೇಲೆ ಅನುಮಾನ ವ್ಯಕ್ತಪಡಿಸಿ ಆಯಿಷಾ ದೂರು ನೀಡಿದ್ದರು. ಆಕೆಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಕಳ್ಳತನ ಮಾಡಿರುವುದು ಗೊತ್ತಾಗಿತ್ತು’ ಎಂದು ಪೊಲೀಸರು ಹೇಳಿದರು.</p>.<p>‘ಪುತ್ರಿಯ ಮದುವೆಗೆಂದು ಆರೋಪಿ ₹5 ಲಕ್ಷ ಸಾಲ ಮಾಡಿದ್ದಳು. ಅದನ್ನು ತೀರಿಸಲು ಕೆಲಸಕ್ಕಿದ್ದ ಮನೆಯಲ್ಲಿ ಚಿನ್ನಾಭರಣ ಕಳ್ಳತನ ಮಾಡಿದ್ದಳು ಎಂಬುದು ತನಿಖೆಯಿಂದ ಗೊತ್ತಾಗಿದೆ’ ಎಂದು ಪೊಲೀಸರು ಹೇಳಿದರು.</p>.<p>ಕಳ್ಳತನ ಮಾಡಿದ್ದ ಚಿನ್ನವನ್ನು ಕೋಣನಕುಂಟೆ ಹಾಗೂ ಮೈಕೊ ಲೇಔಟ್ನ ಚಿನ್ನಾಭರಣ ಅಂಗಡಿಗೆ ಆರೋಪಿ ಮಾರಾಟ ಮಾಡಿದ್ದಳು. ಆ ಚಿನ್ನವನ್ನು ಜಪ್ತಿ ಮಾಡಿಕೊಳ್ಳಲಾಗಿದೆ ಎಂದು ಪೊಲೀಸರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>