‘ದೇಶದ ಅಭಿವೃದ್ಧಿಯಲ್ಲಿ ಸಾರ್ವಜನಿಕ ವಲಯದ ಪಾತ್ರ ಮಹತ್ವದ್ದು. ಸ್ವಾತಂತ್ರ್ಯ ನಂತರ ಅಭಿವೃದ್ಧಿಯ ಕಾರ್ಯತಂತ್ರವೇ ಬದಲಾಯಿತು. ಸರ್ಕಾರವು ಈಗ ಸಾರ್ವಜನಿಕ ವಲಯದ ಸಂಸ್ಥೆಗಳನ್ನೆಲ್ಲಾ ಖಾಸಗೀಕರಣಗೊಳಿಸಲು ಹೊರಟಿದೆ. ಆದರೆ, ನಾವು ಹಾಗೆ ಮಾಡಲಿಲ್ಲ. ಕೇರಳದಲ್ಲಿ ಸಾರ್ವಜನಿಕ ವಲಯವು 115 ಸಂಸ್ಥೆಗಳನ್ನು ಒಳಗೊಂಡಿದೆ. ಅವುಗಳನ್ನು ಬಲಪಡಿಸಲು ಅಗತ್ಯ ಕ್ರಮ ಕೈಗೊಂಡಿದ್ದೇವೆ. ಕಾನೂನಿಗೆ ತಿದ್ದುಪಡಿ ತಂದು ಜಿಲ್ಲಾ ಸಹಕಾರ ಬ್ಯಾಂಕ್ ಹಾಗೂ ರಾಜ್ಯ ಬ್ಯಾಂಕ್ಗಳನ್ನು ವಿಲೀನಗೊಳಿಸಿದ್ದೇವೆ. ಇದರಿಂದ ಹೂಡಿಕೆ ಆಕರ್ಷಿಸಲು ನೆರವಾಗಿದೆ. ಕೇಂದ್ರ ಸರ್ಕಾರವು ಕೇರಳ ಬ್ಯಾಂಕ್ ಅನ್ನು ಒಪ್ಪಿಕೊಳ್ಳುವುದಿಲ್ಲ. ಆದರೆ, ಈ ಬ್ಯಾಂಕ್ ₹70 ಸಾವಿರ ಕೋಟಿ ವಹಿವಾಟು ನಡೆಸುತ್ತಿದೆ’ ಎಂದರು.