<p>ಬೆಂಗಳೂರು: ‘ಕೇಂದ್ರ ಸರ್ಕಾರ ಪೆಟ್ರೋಲ್ ದರವನ್ನು ಪ್ರತಿ ಲೀಟರ್ಗೆ ₹60 ಹಾಗೂ ಡೀಸೆಲ್ ದರ ₹ 50ಕ್ಕೆ ಇಳಿಸಬೇಕು’ ಎಂದು ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾದ ರಾಜ್ಯ ಘಟಕದ ಅಧ್ಯಕ್ಷ ತಾಹಿರ್ ಹುಸೇನ್ ಆಗ್ರಹಿಸಿದರು.</p>.<p>‘ತೈಲ ದರವನ್ನು ತುಸು ಇಳಿಸುವ ಮೂಲಕ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ದೀಪಾವಳಿ ಬಂಪರ್ ಗಿಫ್ಟ್ ಎಂದು ಬೆನ್ನು ತಟ್ಟಿಕೊಳ್ಳುತ್ತಿವೆ. ಈ ದರ ಇಳಿಕೆಯಿಂದ ಗ್ರಾಹಕರಿಗೆ ಯಾವುದೇ ಅನುಕೂಲವಿಲ್ಲ. ನಿರಂತರವಾಗಿ ದರ ಏರಿಸಿ ಈಗ ಸ್ವಲ್ಪ ಪ್ರಮಾಣದಲ್ಲಿ ತಗ್ಗಿಸಿ ಜನರ ಕಣ್ಣೊರೆಸುವ ನಾಟಕ ಆಡುತ್ತಿವೆ’ ಎಂದು ದೂರಿದರು.</p>.<p>‘ಕೋವಿಡ್ನಿಂದ ಜನರು ಸಂಕಷ್ಟಕ್ಕೆ ಸಿಲುಕಿದ್ದು ಇದುವರೆಗೆ ಚೇತರಿಸಿಕೊಂಡಿಲ್ಲ. ಇಂತಹ ಸಂದರ್ಭದಲ್ಲಿ ಜನರಿಗೆ ಆಸರೆಯಾಗಬೇಕಿದ್ದ ಸರ್ಕಾರಗಳು ಅಗತ್ಯ ವಸ್ತುಗಳ ದರ ಏರಿಸಿ, ಜನವಿರೋಧಿ ನೀತಿ ಅನುಸರಿಸುತ್ತಿವೆ’ ಎಂದರು.</p>.<p>‘ಎಲ್ಲ ಕುಟುಂಬಗಳಿಗೆ ತಲಾ 35 ಕೆ.ಜಿಗಳಷ್ಟು ಪಡಿತರ ವಿತರಿಸಬೇಕು. ಅಗತ್ಯ ವಸ್ತುಗಳ ದರ ಏರಿಕೆ ನಿಲ್ಲಿಸಿ,ಅಡುಗೆ ಅನಿಲಕ್ಕೆ ಸಬ್ಸಿಡಿ ಮುಂದುವರಿಸಬೇಕು’ ಎಂದು ಒತ್ತಾಯಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಂಗಳೂರು: ‘ಕೇಂದ್ರ ಸರ್ಕಾರ ಪೆಟ್ರೋಲ್ ದರವನ್ನು ಪ್ರತಿ ಲೀಟರ್ಗೆ ₹60 ಹಾಗೂ ಡೀಸೆಲ್ ದರ ₹ 50ಕ್ಕೆ ಇಳಿಸಬೇಕು’ ಎಂದು ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾದ ರಾಜ್ಯ ಘಟಕದ ಅಧ್ಯಕ್ಷ ತಾಹಿರ್ ಹುಸೇನ್ ಆಗ್ರಹಿಸಿದರು.</p>.<p>‘ತೈಲ ದರವನ್ನು ತುಸು ಇಳಿಸುವ ಮೂಲಕ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ದೀಪಾವಳಿ ಬಂಪರ್ ಗಿಫ್ಟ್ ಎಂದು ಬೆನ್ನು ತಟ್ಟಿಕೊಳ್ಳುತ್ತಿವೆ. ಈ ದರ ಇಳಿಕೆಯಿಂದ ಗ್ರಾಹಕರಿಗೆ ಯಾವುದೇ ಅನುಕೂಲವಿಲ್ಲ. ನಿರಂತರವಾಗಿ ದರ ಏರಿಸಿ ಈಗ ಸ್ವಲ್ಪ ಪ್ರಮಾಣದಲ್ಲಿ ತಗ್ಗಿಸಿ ಜನರ ಕಣ್ಣೊರೆಸುವ ನಾಟಕ ಆಡುತ್ತಿವೆ’ ಎಂದು ದೂರಿದರು.</p>.<p>‘ಕೋವಿಡ್ನಿಂದ ಜನರು ಸಂಕಷ್ಟಕ್ಕೆ ಸಿಲುಕಿದ್ದು ಇದುವರೆಗೆ ಚೇತರಿಸಿಕೊಂಡಿಲ್ಲ. ಇಂತಹ ಸಂದರ್ಭದಲ್ಲಿ ಜನರಿಗೆ ಆಸರೆಯಾಗಬೇಕಿದ್ದ ಸರ್ಕಾರಗಳು ಅಗತ್ಯ ವಸ್ತುಗಳ ದರ ಏರಿಸಿ, ಜನವಿರೋಧಿ ನೀತಿ ಅನುಸರಿಸುತ್ತಿವೆ’ ಎಂದರು.</p>.<p>‘ಎಲ್ಲ ಕುಟುಂಬಗಳಿಗೆ ತಲಾ 35 ಕೆ.ಜಿಗಳಷ್ಟು ಪಡಿತರ ವಿತರಿಸಬೇಕು. ಅಗತ್ಯ ವಸ್ತುಗಳ ದರ ಏರಿಕೆ ನಿಲ್ಲಿಸಿ,ಅಡುಗೆ ಅನಿಲಕ್ಕೆ ಸಬ್ಸಿಡಿ ಮುಂದುವರಿಸಬೇಕು’ ಎಂದು ಒತ್ತಾಯಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>