ಮೃತರ ಕುಟುಂಬಕ್ಕೆ ₹5 ಲಕ್ಷ ಪರಿಹಾರಕ್ಕೆ ಆಗ್ರಹ
ಬೆಂಗಳೂರು: ‘ಕೋವಿಡ್ನಿಂದ ಮೃತಪಟ್ಟ ವ್ಯಕ್ತಿಗಳ ಕುಟುಂಬಗಳಿಗೆ ತಲಾ ₹5 ಲಕ್ಷ ಪರಿಹಾರ ನೀಡಬೇಕು. ಬಡ ಕುಟುಂಬಗಳಿಗೆ ಸರ್ಕಾರದ ವತಿಯಿಂದ ಕನಿಷ್ಠ ₹10 ಸಾವಿರ ಪರಿಹಾರ ಪ್ರಕಟಿಸಬೇಕು’ ಎಂದು ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ರಾಜ್ಯ ಸಮಿತಿಯ ಉಪಾಧ್ಯಕ್ಷ ತಾಜುದ್ದೀನ್ ಇಳಕಲ್ ಒತ್ತಾಯಿಸಿದರು.
ಪಕ್ಷದ ವತಿಯಿಂದ ಸೋಮವಾರ ಹಮ್ಮಿಕೊಂಡಿದ್ದ ‘ಲಾಕ್ಡೌನ್ ಮತ್ತು ಅದರ ಪರಿಣಾಮ’ ಕುರಿತ ಆನ್ಲೈನ್ ವಿಚಾರಗೋಷ್ಠಿಯಲ್ಲಿ ಮಾತನಾಡಿದರು.
ವಿಚಾರವಾದಿ ನೂರ್ ಶ್ರೀಧರ್, ‘ಕೋವಿಡ್ ನಿಯಂತ್ರಿಸಲು ಲಾಕ್ಡೌನ್ ಅನಿವಾರ್ಯ ಹಾಗೂ ತಾತ್ಕಾಲಿಕ ಕ್ರಮ. ಸರ್ಕಾರವು ಆರ್ಥಿಕ ನೆರವು ಪ್ರಕಟಿಸುವ ಮೂಲಕ ಆತ್ಮಸ್ಥೈರ್ಯ ಮೂಡಿಸುವ ಕೆಲಸ ಮಾಡಬೇಕು ’ ಎಂದರು.
ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ತಾಹೀರ್ ಹುಸೇನ್, ಪ್ರಧಾನ ಕಾರ್ಯದರ್ಶಿ ಎಂ.ಎಂ.ಹಬೀಬುಲ್ಲಾ ಖಾನ್, ರಾಜ್ಯ ಕಾರ್ಯದರ್ಶಿ ಆದಿಲ್ ಪಟೇಲ್ ಇದ್ದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.