<p>ಬೆಂಗಳೂರು: ಪಶ್ಚಿಮ ಅಂಚೆ ವಿಭಾಗವು ಬಾಪ ಗ್ರಾಮ ವ್ಯಾಪ್ತಿಯಲ್ಲಿ ಪ್ರಥಮ ಬಾರಿಗೆ ‘ಅಂಚೆ ಜನ ಸಂಪರ್ಕ ಅಭಿಯಾನ’ ಹಮ್ಮಿಕೊಂಡಿತ್ತು.</p>.<p>ಅಭಿಯಾನಕ್ಕೆ ಚಾಲನೆ ನೀಡಿದ ಪೋಸ್ಟ್ ಮಾಸ್ಟರ್ ಜನರಲ್ ಎಲ್.ಕೆ.ಡ್ಯಾಶ್ ಮಾತನಾಡಿ, ‘ಇಂದು ಕೇಂದ್ರ ಸರ್ಕಾರ ಉತ್ತಮ ಯೋಜನೆ ಹಮ್ಮಿಕೊಂಡಿದ್ದು, ಅಂಚೆ ಸೇವೆಯನ್ನು ಮನೆ ಬಾಗಿಲಿಗೆ ಕೊಂಡೊಯ್ಯುವ ಕಾರ್ಯಕ್ರಮ ಹಮ್ಮಿಕೊಂಡಿದೆ. ಗ್ರಾಹಕರು ಇದರ ಪ್ರಯೋಜನ ಪಡೆದುಕೊಳ್ಳಬೇಕು’ ಎಂದು ಕೋರಿದರು.</p>.<p>ಉಳಿತಾಯ ಖಾತೆ ತೆರೆಯುವಿಕೆ, ಐಪಿಪಿಬಿ ಖಾತೆ ತೆರೆಯುವಿಕೆ, ಆಧಾರ್ ನೋಂದಣಿ, ತಿದ್ದುಪಡಿ, ಉಳಿತಾಯ ಖಾತೆಗೆ ಆಧಾರ್ ಸಂಖ್ಯೆ ಜೋಡಣೆ, ಮೈ ಸ್ಟಾಂಪ್, ಮೈಲ್ಸ್ , ಅಂಚೆ ಜೀವ ವಿಮೆ ಕುರಿತು ಮಾಹಿತಿಗಳನ್ನು ಒಂದೇ ಸೂರಿನಡಿಯಲ್ಲಿ ನೀಡಲಾಯಿತು.</p>.<p>ಅಂಚೆ ಉಳಿತಾಯ ಖಾತೆ ಪಾಸ್ ಪುಸ್ತಕ, ಅಂಚೆ ಜೀವ ವಿಮೆ ಪಾಲಿಸಿ ಬಾಂಡ್ ವಿತರಿಸಲಾಯಿತು.</p>.<p>ಬೆಂಗಳೂರು ಪಶ್ಚಿಮ ಅಂಚೆ ವಿಭಾಗದ ವರಿಷ್ಠ ಅಂಚೆ ಅಧೀಕ್ಷಕ ಬಿ.ಚಂದ್ರಕಾಂತ ಕಾಮತ್ ಅಧ್ಯಕ್ಷತೆ ವಹಿಸಿದ್ದರು. ಮಾಚೋಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಎನ್.ಎಸ್.ಸರಸ್ವತಿ, ಉಪಾಧ್ಯಕ್ಷೆ ಲಕ್ಷ್ಮಿದೇವಿ, ಉಪ ಅಂಚೆ ಅಧೀಕ್ಷಕರಾದ ಮೋಹನ್, ಹರಿರಾಂ, ಸುದರ್ಶನ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಂಗಳೂರು: ಪಶ್ಚಿಮ ಅಂಚೆ ವಿಭಾಗವು ಬಾಪ ಗ್ರಾಮ ವ್ಯಾಪ್ತಿಯಲ್ಲಿ ಪ್ರಥಮ ಬಾರಿಗೆ ‘ಅಂಚೆ ಜನ ಸಂಪರ್ಕ ಅಭಿಯಾನ’ ಹಮ್ಮಿಕೊಂಡಿತ್ತು.</p>.<p>ಅಭಿಯಾನಕ್ಕೆ ಚಾಲನೆ ನೀಡಿದ ಪೋಸ್ಟ್ ಮಾಸ್ಟರ್ ಜನರಲ್ ಎಲ್.ಕೆ.ಡ್ಯಾಶ್ ಮಾತನಾಡಿ, ‘ಇಂದು ಕೇಂದ್ರ ಸರ್ಕಾರ ಉತ್ತಮ ಯೋಜನೆ ಹಮ್ಮಿಕೊಂಡಿದ್ದು, ಅಂಚೆ ಸೇವೆಯನ್ನು ಮನೆ ಬಾಗಿಲಿಗೆ ಕೊಂಡೊಯ್ಯುವ ಕಾರ್ಯಕ್ರಮ ಹಮ್ಮಿಕೊಂಡಿದೆ. ಗ್ರಾಹಕರು ಇದರ ಪ್ರಯೋಜನ ಪಡೆದುಕೊಳ್ಳಬೇಕು’ ಎಂದು ಕೋರಿದರು.</p>.<p>ಉಳಿತಾಯ ಖಾತೆ ತೆರೆಯುವಿಕೆ, ಐಪಿಪಿಬಿ ಖಾತೆ ತೆರೆಯುವಿಕೆ, ಆಧಾರ್ ನೋಂದಣಿ, ತಿದ್ದುಪಡಿ, ಉಳಿತಾಯ ಖಾತೆಗೆ ಆಧಾರ್ ಸಂಖ್ಯೆ ಜೋಡಣೆ, ಮೈ ಸ್ಟಾಂಪ್, ಮೈಲ್ಸ್ , ಅಂಚೆ ಜೀವ ವಿಮೆ ಕುರಿತು ಮಾಹಿತಿಗಳನ್ನು ಒಂದೇ ಸೂರಿನಡಿಯಲ್ಲಿ ನೀಡಲಾಯಿತು.</p>.<p>ಅಂಚೆ ಉಳಿತಾಯ ಖಾತೆ ಪಾಸ್ ಪುಸ್ತಕ, ಅಂಚೆ ಜೀವ ವಿಮೆ ಪಾಲಿಸಿ ಬಾಂಡ್ ವಿತರಿಸಲಾಯಿತು.</p>.<p>ಬೆಂಗಳೂರು ಪಶ್ಚಿಮ ಅಂಚೆ ವಿಭಾಗದ ವರಿಷ್ಠ ಅಂಚೆ ಅಧೀಕ್ಷಕ ಬಿ.ಚಂದ್ರಕಾಂತ ಕಾಮತ್ ಅಧ್ಯಕ್ಷತೆ ವಹಿಸಿದ್ದರು. ಮಾಚೋಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಎನ್.ಎಸ್.ಸರಸ್ವತಿ, ಉಪಾಧ್ಯಕ್ಷೆ ಲಕ್ಷ್ಮಿದೇವಿ, ಉಪ ಅಂಚೆ ಅಧೀಕ್ಷಕರಾದ ಮೋಹನ್, ಹರಿರಾಂ, ಸುದರ್ಶನ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>