ಸುದ್ದಿಗಾರರೊಂದಿಗೆ ಮಾತನಾಡಿ, ‘ಶಿಕ್ಷಕರಿಗೆ ವೇತನ ನೀಡಲು ಹಣವಿಲ್ಲ. ಆರ್ಥಿಕ ವರ್ಷದ ಅಂತ್ಯಕ್ಕೆ ಕಾಲಿಟ್ಟಿದ್ದರೂ ಶಾಸಕರ ಪ್ರದೇಶಾಭಿವೃದ್ಧಿ ನಿಧಿಯ ಮೂರು ಕಂತು ಹಣ ಇನ್ನೂ ಬಿಡುಗಡೆಯಾಗಿಲ್ಲ. ದುಡ್ಡಿಲ್ಲದ ದರಿದ್ರ ಸರ್ಕಾರಕ್ಕೆ ಬಿ.ಎಸ್.ಯಡಿಯೂರಪ್ಪ ಮುಖ್ಯಸ್ಥರಾಗಿದ್ದಾರೆ. ಮುಖ್ಯಮಂತ್ರಿ ಹೋದಲ್ಲೆಲ್ಲ ಬರಿ ಬುರುಡೆ ಬಿಟ್ಟುಕೊಂಡು ತಿರುಗಾಡುತ್ತಿದ್ದಾರೆ’ ಎಂದು ಟೀಕಿಸಿದರು.