<p><strong>ಬೆಂಗಳೂರು:</strong> ವಾಟ್ಸ್ಆ್ಯಪ್ನಲ್ಲಿ ಮಹಿಳೆಯೊಬ್ಬರ ಹೆಸರಿನಲ್ಲಿ ನಕಲಿ ಖಾತೆ ತೆರೆದು ವಂಚಿಸಿದ್ದ ಆರೋಪದಡಿ ಸಮೀರ್ ಕುಮಾರ್ (25) ಎಂಬಾತನನ್ನು ಪೂರ್ವ ವಿಭಾಗದ ಸೈಬರ್ ಕ್ರೈಂ ಠಾಣೆ ಪೊಲೀಸರು ಬಂಧಿಸಿದ್ದಾರೆ.</p>.<p>‘ಆರೋಪಿಯ ಕೃತ್ಯದ ಬಗ್ಗೆ ಮಂಜುಳಾ ಎಂಬುವರು ದೂರು ನೀಡಿದ್ದರು. ಅದರನ್ವಯ ಪಶ್ಚಿಮ ಬಂಗಾಳದ ಸಮೀರ್ಕುಮಾರ್ನನ್ನು ಬಂಧಿಸಲಾಗಿದೆ. ಆತನಿಂದ ಮೊಬೈಲ್ ಹಾಗೂ ಸಿಮ್ ಕಾರ್ಡ್ ಜಪ್ತಿ ಮಾಡಲಾಗಿದೆ’ ಎಂದು ಪೊಲೀಸರು ಹೇಳಿದರು.</p>.<p>‘ಆರೋಪಿ ಸಮೀರ್ ಕುಮಾರ್, ನಗರದ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದ. ಲಾಕ್ಡೌನ್ನಿಂದಾಗಿ ಕೆಲಸ ಕಳೆದುಕೊಂಡಿದ್ದ. ಜೀವನ ನಿರ್ವಹಣೆ ಕಷ್ಟವಾಗಿದ್ದರಿಂದ ಬೇರೆ ಕಂಪನಿಯಲ್ಲಿ ಕೆಲಸಕ್ಕೆ ಹುಡುಕಾಟ ನಡೆಸುತ್ತಿದ್ದ. ಇತ್ತೀಚೆಗೆ ಇಂದಿರಾನಗರದ ಕಂಪನಿಯೊಂದರಲ್ಲಿ ಸಂದರ್ಶನಕ್ಕೆ ಹೋಗಿದ್ದ. ಅದೇ ಸಂದರ್ಭದಲ್ಲಿ ಕಂಪನಿ ಉದ್ಯೋಗಿಗಳ ಹೆಸರು- ವಿಳಾಸವನ್ನು ಆರೋಪಿ ತಿಳಿದುಕೊಂಡಿದ್ದ’ ಎಂದು ಮಾಹಿತಿ ನೀಡಿದರು.</p>.<p>‘ನಕಲಿ ದಾಖಲೆಗಳನ್ನು ಕೊಟ್ಟು ಹೊಸ ಸಿಮ್ ಕಾರ್ಡ್ ಖರೀದಿಸಿದ್ದ ಆರೋಪಿ, ಅದೇ ಸಂಖ್ಯೆ ಬಳಸಿಕೊಂಡು ವಾಟ್ಸ್ಆ್ಯಪ್ನಲ್ಲಿ ನಕಲಿ ಖಾತೆಯೊಂದನ್ನು ತೆರೆದಿದ್ದ. ಅದೇ ಖಾತೆಗೆ ಮಂಜುಳಾ ಅವರ ಫೋಟೊವನ್ನು ಅಪ್ಲೋಡ್ ಮಾಡಿ, ಅವರದ್ದೇ ಖಾತೆ ಎಂದು ಬಿಂಬಿಸಿದ್ದ’ ಎಂದೂ ಪೊಲೀಸರು ತಿಳಿಸಿದರು.</p>.<p>‘ಮಂಜುಳಾ ಅವರ ಸ್ನೇಹಿತರಿಗೆ ವಾಟ್ಸ್ಆ್ಯಪ್ನಲ್ಲಿ ಸಂದೇಶ ಕಳುಹಿಸಿದ್ದ ಆರೋಪಿ, ‘ನನ್ನ ತಾಯಿಗೆ ಹುಷಾರಿಲ್ಲ. ವೈದ್ಯಕೀಯ ಚಿಕಿತ್ಸೆಗೆ ಹಣ ಬೇಕಿದೆ. ಹಣ ವರ್ಗಾವಣೆ ಮಾಡಿ’ ಎಂದಿದ್ದ. ಬ್ಯಾಂಕ್ ಖಾತೆಯೊಂದರ ವಿವರವನ್ನೂ ಕಳುಹಿಸಿದ್ದ. ಮಂಜುಳಾ ಅವರೇ ಸಂದೇಶ ಕಳುಹಿಸಿರಬಹುದೆಂದು ನಂಬಿದ್ದ ಸ್ನೇಹಿತರೊಬ್ಬರು, ₹4,500 ನೀಡಿದ್ದರು. ಈ ವಿಷಯ ಮಂಜುಳಾ ಅವರಿಗೆ ಇತ್ತೀಚೆಗೆ ಗೊತ್ತಾಗಿತ್ತು. ಬಳಿಕ ಅವರು ಠಾಣೆಗೆ ದೂರು ನೀಡಿದ್ದರು’ ಎಂದೂ ವಿವರಿಸಿದರು.</p>.<p>‘ಲಾಕ್ಡೌನ್ನಿಂದ ಕೆಲಸ ಹೋಯಿತು. ಮನೆಯಲ್ಲಿ ಬಡತನವಿದ್ದು, ಜೀವನ ನಡೆಸುವುದು ಕಷ್ಟವಾಗಿತ್ತು. ಹೀಗಾಗಿ, ಕೃತ್ಯ ಎಸಗಿರುವುದಾಗಿ ಆರೋಪಿ ಹೇಳಿಕೆ ನೀಡಿದ್ದಾನೆ’ ಎಂದೂ ಪೊಲೀಸರು ಮಾಹಿತಿ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ವಾಟ್ಸ್ಆ್ಯಪ್ನಲ್ಲಿ ಮಹಿಳೆಯೊಬ್ಬರ ಹೆಸರಿನಲ್ಲಿ ನಕಲಿ ಖಾತೆ ತೆರೆದು ವಂಚಿಸಿದ್ದ ಆರೋಪದಡಿ ಸಮೀರ್ ಕುಮಾರ್ (25) ಎಂಬಾತನನ್ನು ಪೂರ್ವ ವಿಭಾಗದ ಸೈಬರ್ ಕ್ರೈಂ ಠಾಣೆ ಪೊಲೀಸರು ಬಂಧಿಸಿದ್ದಾರೆ.</p>.<p>‘ಆರೋಪಿಯ ಕೃತ್ಯದ ಬಗ್ಗೆ ಮಂಜುಳಾ ಎಂಬುವರು ದೂರು ನೀಡಿದ್ದರು. ಅದರನ್ವಯ ಪಶ್ಚಿಮ ಬಂಗಾಳದ ಸಮೀರ್ಕುಮಾರ್ನನ್ನು ಬಂಧಿಸಲಾಗಿದೆ. ಆತನಿಂದ ಮೊಬೈಲ್ ಹಾಗೂ ಸಿಮ್ ಕಾರ್ಡ್ ಜಪ್ತಿ ಮಾಡಲಾಗಿದೆ’ ಎಂದು ಪೊಲೀಸರು ಹೇಳಿದರು.</p>.<p>‘ಆರೋಪಿ ಸಮೀರ್ ಕುಮಾರ್, ನಗರದ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದ. ಲಾಕ್ಡೌನ್ನಿಂದಾಗಿ ಕೆಲಸ ಕಳೆದುಕೊಂಡಿದ್ದ. ಜೀವನ ನಿರ್ವಹಣೆ ಕಷ್ಟವಾಗಿದ್ದರಿಂದ ಬೇರೆ ಕಂಪನಿಯಲ್ಲಿ ಕೆಲಸಕ್ಕೆ ಹುಡುಕಾಟ ನಡೆಸುತ್ತಿದ್ದ. ಇತ್ತೀಚೆಗೆ ಇಂದಿರಾನಗರದ ಕಂಪನಿಯೊಂದರಲ್ಲಿ ಸಂದರ್ಶನಕ್ಕೆ ಹೋಗಿದ್ದ. ಅದೇ ಸಂದರ್ಭದಲ್ಲಿ ಕಂಪನಿ ಉದ್ಯೋಗಿಗಳ ಹೆಸರು- ವಿಳಾಸವನ್ನು ಆರೋಪಿ ತಿಳಿದುಕೊಂಡಿದ್ದ’ ಎಂದು ಮಾಹಿತಿ ನೀಡಿದರು.</p>.<p>‘ನಕಲಿ ದಾಖಲೆಗಳನ್ನು ಕೊಟ್ಟು ಹೊಸ ಸಿಮ್ ಕಾರ್ಡ್ ಖರೀದಿಸಿದ್ದ ಆರೋಪಿ, ಅದೇ ಸಂಖ್ಯೆ ಬಳಸಿಕೊಂಡು ವಾಟ್ಸ್ಆ್ಯಪ್ನಲ್ಲಿ ನಕಲಿ ಖಾತೆಯೊಂದನ್ನು ತೆರೆದಿದ್ದ. ಅದೇ ಖಾತೆಗೆ ಮಂಜುಳಾ ಅವರ ಫೋಟೊವನ್ನು ಅಪ್ಲೋಡ್ ಮಾಡಿ, ಅವರದ್ದೇ ಖಾತೆ ಎಂದು ಬಿಂಬಿಸಿದ್ದ’ ಎಂದೂ ಪೊಲೀಸರು ತಿಳಿಸಿದರು.</p>.<p>‘ಮಂಜುಳಾ ಅವರ ಸ್ನೇಹಿತರಿಗೆ ವಾಟ್ಸ್ಆ್ಯಪ್ನಲ್ಲಿ ಸಂದೇಶ ಕಳುಹಿಸಿದ್ದ ಆರೋಪಿ, ‘ನನ್ನ ತಾಯಿಗೆ ಹುಷಾರಿಲ್ಲ. ವೈದ್ಯಕೀಯ ಚಿಕಿತ್ಸೆಗೆ ಹಣ ಬೇಕಿದೆ. ಹಣ ವರ್ಗಾವಣೆ ಮಾಡಿ’ ಎಂದಿದ್ದ. ಬ್ಯಾಂಕ್ ಖಾತೆಯೊಂದರ ವಿವರವನ್ನೂ ಕಳುಹಿಸಿದ್ದ. ಮಂಜುಳಾ ಅವರೇ ಸಂದೇಶ ಕಳುಹಿಸಿರಬಹುದೆಂದು ನಂಬಿದ್ದ ಸ್ನೇಹಿತರೊಬ್ಬರು, ₹4,500 ನೀಡಿದ್ದರು. ಈ ವಿಷಯ ಮಂಜುಳಾ ಅವರಿಗೆ ಇತ್ತೀಚೆಗೆ ಗೊತ್ತಾಗಿತ್ತು. ಬಳಿಕ ಅವರು ಠಾಣೆಗೆ ದೂರು ನೀಡಿದ್ದರು’ ಎಂದೂ ವಿವರಿಸಿದರು.</p>.<p>‘ಲಾಕ್ಡೌನ್ನಿಂದ ಕೆಲಸ ಹೋಯಿತು. ಮನೆಯಲ್ಲಿ ಬಡತನವಿದ್ದು, ಜೀವನ ನಡೆಸುವುದು ಕಷ್ಟವಾಗಿತ್ತು. ಹೀಗಾಗಿ, ಕೃತ್ಯ ಎಸಗಿರುವುದಾಗಿ ಆರೋಪಿ ಹೇಳಿಕೆ ನೀಡಿದ್ದಾನೆ’ ಎಂದೂ ಪೊಲೀಸರು ಮಾಹಿತಿ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>