<p><strong>ಬೆಂಗಳೂರು: </strong>ಕೆಂಗೇರಿ ಸಂಚಾರ ಠಾಣೆ ವ್ಯಾಪ್ತಿಯ ಹೆಮ್ಮಿಗೆಪುರ ಸಮೀಪದ ನೈಸ್ ರಸ್ತೆಯಲ್ಲಿ ವ್ಹೀಲಿಂಗ್ ಮಾಡುತ್ತಿದ್ದ ಮೂವರು ಯುವಕರನ್ನು ಹಿಡಿದು ಸಾರ್ವಜನಿಕರೇ ಥಳಿಸಿರುವ ಘಟನೆ ಸೋಮವಾರ ನಡೆದಿದೆ.</p>.<p>ಯುವಕರ ಹೆಸರು ಗೊತ್ತಾಗಿಲ್ಲ. ಘಟನೆ ಸಂಬಂಧ ಯಾವುದೇ ದೂರು ಸಹ ದಾಖಲಾಗಿಲ್ಲ.’ದ್ವಿಚಕ್ರ ವಾಹನಗಳಲ್ಲಿ ನೈಸ್ ರಸ್ತೆಗೆ ಬಂದಿದ್ದ ಯುವಕರು, ಅಪಾಯಕಾರಿ<br />ಯಾಗಿ ವ್ಹೀಲಿಂಗ್ ಮಾಡುತ್ತಿದ್ದರು. ಅದನ್ನು ಪ್ರಶ್ನಿಸಿದ್ದ ಸ್ಥಳೀಯರೊಬ್ಬರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದರು. ಗುಂಪು ಸೇರಿದ್ದ ಸ್ಥಳೀಯರು, ದ್ವಿಚಕ್ರವಾಹನಗಳನ್ನು ವಶಕ್ಕೆ ಪಡೆದು ಯುವಕರನ್ನು ಸುತ್ತುವರಿದು ಥಳಿಸಿದರು. ಕೆಲ ಹೊತ್ತು ರಸ್ತೆಯಲ್ಲೇ ನಿಲ್ಲಿಸಿ ಬುದ್ದಿವಾದ ಹೇಳಿ ಬಿಟ್ಟು ಕಳುಹಿಸಿದರು’ಎಂದು ಪ್ರತ್ಯಕ್ಷದರ್ಶಿಯೊಬ್ಬರು ಹೇಳಿದರು.</p>.<p class="Subhead"><strong>ಗಾಯಗೊಂಡಿದ್ದ ಯುವಕ: </strong>ನೈಸ್ ರಸ್ತೆಯಲ್ಲಿ ವ್ಹೀಲಿಂಗ್ ಮಾಡುವವರ ಸಂಖ್ಯೆ ಹೆಚ್ಚಾಗುತ್ತಿದ್ದು, ಹೆಮ್ಮಿಗೆಪುರದ ನಿವಾಸಿಗಳಲ್ಲಿ ಆತಂಕ ಮೂಡಿದೆ.</p>.<p>‘ಇತ್ತೀಚೆಗೆ ಯುವಕನೊಬ್ಬ ವ್ಹೀಲಿಂಗ್ ಮಾಡುವ ವೇಳೆಯಲ್ಲೇ ಸ್ಥಳೀಯ ಯುವಕನಿಗೆ ಸ್ಕೂಟಿ ಗುದ್ದಿಸಿದ್ದ. ಗಾಯಗೊಂಡಿದ್ದ ಯುವಕ ಇದುವರೆಗೂ ಚೇತರಿಸಿಕೊಂಡಿಲ್ಲ. ಈ ಘಟನೆಯಿಂದ ಕೋಪಗೊಂಡಿರುವ ಸ್ಥಳೀಯರು, ವ್ಹೀಲಿಂಗ್ ಮಾಡಲು ಬರುವ ಯುವಕರನ್ನು ಹಿಡಿದು ಪಾಠ ಕಲಿಸುತ್ತಿದ್ದಾರೆ’ ಎಂದು ನಿವಾಸಿಯೊಬ್ಬರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ಕೆಂಗೇರಿ ಸಂಚಾರ ಠಾಣೆ ವ್ಯಾಪ್ತಿಯ ಹೆಮ್ಮಿಗೆಪುರ ಸಮೀಪದ ನೈಸ್ ರಸ್ತೆಯಲ್ಲಿ ವ್ಹೀಲಿಂಗ್ ಮಾಡುತ್ತಿದ್ದ ಮೂವರು ಯುವಕರನ್ನು ಹಿಡಿದು ಸಾರ್ವಜನಿಕರೇ ಥಳಿಸಿರುವ ಘಟನೆ ಸೋಮವಾರ ನಡೆದಿದೆ.</p>.<p>ಯುವಕರ ಹೆಸರು ಗೊತ್ತಾಗಿಲ್ಲ. ಘಟನೆ ಸಂಬಂಧ ಯಾವುದೇ ದೂರು ಸಹ ದಾಖಲಾಗಿಲ್ಲ.’ದ್ವಿಚಕ್ರ ವಾಹನಗಳಲ್ಲಿ ನೈಸ್ ರಸ್ತೆಗೆ ಬಂದಿದ್ದ ಯುವಕರು, ಅಪಾಯಕಾರಿ<br />ಯಾಗಿ ವ್ಹೀಲಿಂಗ್ ಮಾಡುತ್ತಿದ್ದರು. ಅದನ್ನು ಪ್ರಶ್ನಿಸಿದ್ದ ಸ್ಥಳೀಯರೊಬ್ಬರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದರು. ಗುಂಪು ಸೇರಿದ್ದ ಸ್ಥಳೀಯರು, ದ್ವಿಚಕ್ರವಾಹನಗಳನ್ನು ವಶಕ್ಕೆ ಪಡೆದು ಯುವಕರನ್ನು ಸುತ್ತುವರಿದು ಥಳಿಸಿದರು. ಕೆಲ ಹೊತ್ತು ರಸ್ತೆಯಲ್ಲೇ ನಿಲ್ಲಿಸಿ ಬುದ್ದಿವಾದ ಹೇಳಿ ಬಿಟ್ಟು ಕಳುಹಿಸಿದರು’ಎಂದು ಪ್ರತ್ಯಕ್ಷದರ್ಶಿಯೊಬ್ಬರು ಹೇಳಿದರು.</p>.<p class="Subhead"><strong>ಗಾಯಗೊಂಡಿದ್ದ ಯುವಕ: </strong>ನೈಸ್ ರಸ್ತೆಯಲ್ಲಿ ವ್ಹೀಲಿಂಗ್ ಮಾಡುವವರ ಸಂಖ್ಯೆ ಹೆಚ್ಚಾಗುತ್ತಿದ್ದು, ಹೆಮ್ಮಿಗೆಪುರದ ನಿವಾಸಿಗಳಲ್ಲಿ ಆತಂಕ ಮೂಡಿದೆ.</p>.<p>‘ಇತ್ತೀಚೆಗೆ ಯುವಕನೊಬ್ಬ ವ್ಹೀಲಿಂಗ್ ಮಾಡುವ ವೇಳೆಯಲ್ಲೇ ಸ್ಥಳೀಯ ಯುವಕನಿಗೆ ಸ್ಕೂಟಿ ಗುದ್ದಿಸಿದ್ದ. ಗಾಯಗೊಂಡಿದ್ದ ಯುವಕ ಇದುವರೆಗೂ ಚೇತರಿಸಿಕೊಂಡಿಲ್ಲ. ಈ ಘಟನೆಯಿಂದ ಕೋಪಗೊಂಡಿರುವ ಸ್ಥಳೀಯರು, ವ್ಹೀಲಿಂಗ್ ಮಾಡಲು ಬರುವ ಯುವಕರನ್ನು ಹಿಡಿದು ಪಾಠ ಕಲಿಸುತ್ತಿದ್ದಾರೆ’ ಎಂದು ನಿವಾಸಿಯೊಬ್ಬರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>