ಯುವಕರನ್ನು ವಶಕ್ಕೆ ಪಡೆದು ಠಾಣೆಗೆ ಕರೆದೊಯ್ದಿದ್ದ ಪೊಲೀಸರು, ಕೆಲ ಹೊತ್ತಿನ ಬಳಿಕ ಅವರನ್ನು ಬಿಟ್ಟು ಕಳುಹಿಸಿದ್ದರು. ವಿಷಯ ತಿಳಿದ ಪಾದರಾಯನಪುರ ಕಾರ್ಪೋರೇಟರ್ ಇಮ್ರಾನ್ ಪಾಷಾ, ಯುವಕರನ್ನು ಸಂಪರ್ಕಿಸಿ ಮಾಹಿತಿ ಪಡೆದುಕೊಂಡಿದ್ದರು. ನಂತರ, ಅವರೇ ಯುವಕರ ಮೂಲಕ ದೂರು ಕೊಡಿಸಿ ಸ್ಥಳೀಯರ ವಿರುದ್ಧ ಪ್ರಕರಣ ದಾಖಲಾಗುವಂತೆ ಮಾಡಿದ್ದಾರೆ.