<p><strong>ಬೆಂಗಳೂರು</strong>: ವ್ಹೀಲಿಂಗ್ ಹಾಗೂ ದೋಷಪೂರಿತ ಸೈಲೆನ್ಸರ್ ಪ್ರಕರಣದಲ್ಲಿ ಸಿಕ್ಕಿಬೀಳುವ ಆರೋಪಿಗಳ ಜೊತೆಗೆ, ವಾಹನಗಳನ್ನು ಬದಲಾಯಿಸಿಕೊಟ್ಟ ಗ್ಯಾರೇಜ್ ಮಾಲೀಕರ ವಿರುದ್ಧವೂ ಪ್ರಕರಣ ದಾಖಲಿಸಿ ಕೊಳ್ಳುವಂತೆ ನಗರ ಪೊಲೀಸ್ ಕಮಿಷನರ್ ಕಮಲ್ ಪಂತ್ ಸೂಚನೆ ನೀಡಿದ್ದಾರೆ.</p>.<p>ನಗರದಲ್ಲಿ ವ್ಹೀಲಿಂಗ್ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿವೆ. ದೋಷಪೂರಿತ ಸೈಲೆನ್ಸರ್ ಅಳವಡಿಸಿಕೊಂಡು ಕರ್ಕಶ ಶಬ್ದ ಮಾಡುವವವರೂ ಜಾಸ್ತಿ ಆಗುತ್ತಿದ್ದಾರೆ. ಇಂಥ ಕೃತ್ಯಕ್ಕೆ ಗ್ಯಾರೇಜ್ ಮಾಲೀಕರು ಸಹಕರಿಸುತ್ತಿದ್ದಾರೆ. ಹೀಗಾಗಿ ಅವರ ವಿರುದ್ಧವೂ ಪ್ರಕರಣ ದಾಖಲಿಸಿಕೊಳ್ಳುವಂತೆ ಪಂತ್ ಹೇಳಿದ್ದಾರೆ.</p>.<p>ಇತ್ತೀಚೆಗೆ ವ್ಹೀಲಿಂಗ್ ಮಾಡು ತ್ತಿದ್ದ ಬಾಲಕರು ಸೇರಿದಂತೆ 16 ಮಂದಿಯನ್ನು ಪೊಲೀಸರು ಬಂಧಿಸಿದ್ದರು. ವ್ಹೀಲಿಂಗ್ ಮಾಡಲು ಬಳಸುತ್ತಿದ್ದ ದ್ವಿಚಕ್ರ ವಾಹನಗಳನ್ನು ಗ್ಯಾರೇಜ್ ಮಾಲೀಕನೊಬ್ಬ ಬದಲಾಯಿಸಿಕೊಟ್ಟಿದ್ದ ಸಂಗತಿ ತನಿಖೆಯಿಂದ ಗೊತ್ತಾಗಿತ್ತು.</p>.<p>‘ವ್ಹೀಲಿಂಗ್ನಿಂದ ಹಲವರ ಪ್ರಾಣ ಹೋಗಿದೆ. ದೋಷಪೂರಿತ ಸೈಲೆನ್ಸರ್ಗಳಿಂದ ನಾನಾ ಸಮಸ್ಯೆಗಳು ಎದುರಾಗುತ್ತವೆ. ಈ ಎರಡೂ<br />ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಲಾ<br />ಗಿದೆ. ಆರೋಪಿಗಳ ಜೊತೆ, ಕೃತ್ಯಕ್ಕೆ ಸಹಕರಿಸುವ ಎಲ್ಲರ ವಿರುದ್ಧವೂ ಕ್ರಮ ಕೈಗೊಳ್ಳಲಾಗು ವುದು’ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ವ್ಹೀಲಿಂಗ್ ಹಾಗೂ ದೋಷಪೂರಿತ ಸೈಲೆನ್ಸರ್ ಪ್ರಕರಣದಲ್ಲಿ ಸಿಕ್ಕಿಬೀಳುವ ಆರೋಪಿಗಳ ಜೊತೆಗೆ, ವಾಹನಗಳನ್ನು ಬದಲಾಯಿಸಿಕೊಟ್ಟ ಗ್ಯಾರೇಜ್ ಮಾಲೀಕರ ವಿರುದ್ಧವೂ ಪ್ರಕರಣ ದಾಖಲಿಸಿ ಕೊಳ್ಳುವಂತೆ ನಗರ ಪೊಲೀಸ್ ಕಮಿಷನರ್ ಕಮಲ್ ಪಂತ್ ಸೂಚನೆ ನೀಡಿದ್ದಾರೆ.</p>.<p>ನಗರದಲ್ಲಿ ವ್ಹೀಲಿಂಗ್ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿವೆ. ದೋಷಪೂರಿತ ಸೈಲೆನ್ಸರ್ ಅಳವಡಿಸಿಕೊಂಡು ಕರ್ಕಶ ಶಬ್ದ ಮಾಡುವವವರೂ ಜಾಸ್ತಿ ಆಗುತ್ತಿದ್ದಾರೆ. ಇಂಥ ಕೃತ್ಯಕ್ಕೆ ಗ್ಯಾರೇಜ್ ಮಾಲೀಕರು ಸಹಕರಿಸುತ್ತಿದ್ದಾರೆ. ಹೀಗಾಗಿ ಅವರ ವಿರುದ್ಧವೂ ಪ್ರಕರಣ ದಾಖಲಿಸಿಕೊಳ್ಳುವಂತೆ ಪಂತ್ ಹೇಳಿದ್ದಾರೆ.</p>.<p>ಇತ್ತೀಚೆಗೆ ವ್ಹೀಲಿಂಗ್ ಮಾಡು ತ್ತಿದ್ದ ಬಾಲಕರು ಸೇರಿದಂತೆ 16 ಮಂದಿಯನ್ನು ಪೊಲೀಸರು ಬಂಧಿಸಿದ್ದರು. ವ್ಹೀಲಿಂಗ್ ಮಾಡಲು ಬಳಸುತ್ತಿದ್ದ ದ್ವಿಚಕ್ರ ವಾಹನಗಳನ್ನು ಗ್ಯಾರೇಜ್ ಮಾಲೀಕನೊಬ್ಬ ಬದಲಾಯಿಸಿಕೊಟ್ಟಿದ್ದ ಸಂಗತಿ ತನಿಖೆಯಿಂದ ಗೊತ್ತಾಗಿತ್ತು.</p>.<p>‘ವ್ಹೀಲಿಂಗ್ನಿಂದ ಹಲವರ ಪ್ರಾಣ ಹೋಗಿದೆ. ದೋಷಪೂರಿತ ಸೈಲೆನ್ಸರ್ಗಳಿಂದ ನಾನಾ ಸಮಸ್ಯೆಗಳು ಎದುರಾಗುತ್ತವೆ. ಈ ಎರಡೂ<br />ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಲಾ<br />ಗಿದೆ. ಆರೋಪಿಗಳ ಜೊತೆ, ಕೃತ್ಯಕ್ಕೆ ಸಹಕರಿಸುವ ಎಲ್ಲರ ವಿರುದ್ಧವೂ ಕ್ರಮ ಕೈಗೊಳ್ಳಲಾಗು ವುದು’ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>