ಬೆಂಗಳೂರು: ‘ನಮ್ಮ ಸರ್ಕಾರದ ಅವಧಿಯಲ್ಲಿ ಕಾಂಗ್ರೆಸ್ ಜತೆ ಸೇರಿಕೊಂಡು ಸುಳ್ಳು ಆರೋಪಗಳನ್ನು ಮಾಡಿದ್ದ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಎಲ್ಲಿ ಹೋಗಿದ್ದಾರೆ? ಗುತ್ತಿಗೆದಾರರ ಬಿಲ್ನ ಒಂದು ಪೈಸೆಯೂ ಬಿಡುಗಡೆ ಮಾಡಿಲ್ಲ. ಸಚಿವರು ರೇಟ್ ಫಿಕ್ಸ್ ಮಾಡಿಕೊಳ್ಳುತ್ತಿದ್ದಾರೆ. ಕೆಂಪಣ್ಣ ಏಕೆ ಮಾತನಾಡುತ್ತಿಲ್ಲ’ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರಶ್ನಿಸಿದರು.