<p><strong>ಬೆಂಗಳೂರು:</strong> ‘ಸಮಾಜದಲ್ಲಿ ಸ್ವಾರ್ಥ, ದ್ವೇಷ ಮನೋಭಾವನೆ ಹೆಚ್ಚಾಗುತ್ತಿದೆ. ಇಂಥ ಧಾರ್ಮಿಕ ಆಚರಣೆಗಳ ಮೂಲಕ ಉತ್ತಮ ಗುಣಗಳನ್ನು ಬೆಳೆಸಿಕೊಂಡು ಮಾದರಿ ಜೀವನ ನಡೆಸಬೇಕು’ ಎಂದು ಹೈಕೋರ್ಟ್ ನ್ಯಾಯಮೂರ್ತಿ ರಾಮಚಂದ್ರ ಡಿ. ಹುದ್ದಾರ ತಿಳಿಸಿದರು.<br><br> ಶ್ರೀರಾಮ ಸೇವಾ ಮಂಡಳಿ ರಾಮನವಮಿ ಸೆಲಬ್ರೇಷನ್ ಟ್ರಸ್ಟ್ ನಗರದ ಕೋಟೆ ಪ್ರೌಢಶಾಲೆ ಆವರಣದಲ್ಲಿ ಹಮ್ಮಿಕೊಂಡಿರುವ '87ನೇ ಶ್ರೀ ರಾಮನವಮಿ ಸಂಗೀತೋತ್ಸವ ಉದ್ಘಾಟನೆ ಮತ್ತು 'ಎಸ್.ಎಂ.ಕೃಷ್ಣ ಸ್ಮಾರಕ ರಾಷ್ಟ್ರೀಯ ಸಂಗೀತ ಪ್ರಶಸ್ತಿ' ಪ್ರದಾನ ಸಮಾರಂಭದಲ್ಲಿ ಅವರು ಮಾತನಾಡಿದರು.</p>.<p>‘ಧರ್ಮ ಇದ್ದ ಕಡೆ ನ್ಯಾಯ ಇರುತ್ತದೆ. ಧರ್ಮದಲ್ಲಿ ಅಧರ್ಮ ಕೂಡಿದರೆ ಸಮಾಜ ಹಾಳಾಗುತ್ತದೆ. ಪ್ರತಿಯೊಬ್ಬ ಮನುಷ್ಯ ಆದರ್ಶವಾಗುವ ಮೂಲಕ ಸಮಾಜದ ಸುಧಾರಣೆಗೆ ತಮ್ಮ ಜೀವನವನ್ನು ಮುಡುಪಾಗಿ ಇಡಬೇಕು’ ಎಂದು ಸಲಹೆ ನೀಡಿದರು.</p>.<p>‘ರಾಮನ ಆದರ್ಶವನ್ನು ನಾವೆಲ್ಲರೂ ಪಾಲಿಸಿದರೆ ಸಮಾಜ ಸುಧಾರಣೆ ಮಾಡಬಹುದು. ಒಳ್ಳೆಯ ಗುಣಗಳನ್ನು ಅಳವಡಿಸಿಕೊಂಡು ಮಾದರಿ ಜೀವನ ನಡೆಸಬೇಕು’ ಎಂದರು.<br /><br /> ಮಾಜಿ ಮುಖ್ಯಮಂತ್ರಿ ಎಸ್. ಎಂ.ಕೃಷ್ಣ ಅವರ ಪತ್ನಿ ಪ್ರೇಮಾ ಕೃಷ್ಣ ಮಾತನಾಡಿ, ‘ಕೃಷ್ಣ ಅವರಿಗೆ ಸಂಗೀತ ಎಂದರೆ ತುಂಬಾ ಇಷ್ಟ. ಪ್ರತಿ ವರ್ಷ ತಪ್ಪದೇ ರಾಮೋತ್ಸವದ ಸಂಗೀತ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುತ್ತಿದ್ದರು’ ಎಂದು ನೆನಪಿಸಿಕೊಂಡರು.</p>.<p>‘ಹಲವು ವರ್ಷಗಳಿಂದ ನಡೆಸಿಕೊಂಡು ಬರುತ್ತಿರುವ ರಾಮಸೇವಾ ಮಂಡಳಿಯ ರಾಮನವಮಿ ಸಂಗೀತೋತ್ಸವ ದೇಶಕ್ಕೆ ಮಾದರಿಯಾಗಿದೆ. ಇಂಥ ಸಂಗೀತೋತ್ಸವದಲ್ಲಿ ಪಾಲ್ಗೊಳ್ಳಲು ಅವಕಾಶ ಮಾಡಿಕೊಟ್ಟ ಆಯೋಜಕರಿಗೆ ಅಭಾರಿಯಾಗಿದ್ದೇನೆ’ ಎಂದರು.</p>.<p>ಕಾರ್ಯಕ್ರಮದಲ್ಲಿ ರಾಮಚಂದ್ರ ಹುದ್ದಾರ ಅವರು ವಿದ್ವಾನ್ ಸಂದೀಪ ನಾರಾಯಣ್ ಅವರಿಗೆ ‘ಎಸ್.ಎಂ.ಕೃಷ್ಣ ಸ್ಮಾರಕ ರಾಷ್ಟ್ರೀಯ ಸಂಗೀತ ಪ್ರಶಸ್ತಿ’ ಪ್ರದಾನ ಮಾಡಿದರು. ಪ್ರಶಸ್ತಿಯು ₹ 1 ಲಕ್ಷ ನಗದು, ಸ್ಮರಣಿಕೆ ಮತ್ತು ಫಲ ತಾಂಬೂಲವನ್ನು ಒಳಗೊಂಡಿದೆ. ಎಸ್.ಎಂ. ಕೃಷ್ಣ ಕುಟುಂಬದವರು ರಾಮಸೇವಾ ಮಂಡಳಿಯಲ್ಲಿ ಈ ಪ್ರಶಸ್ತಿಯನ್ನು ಸ್ಥಾಪಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ‘ಸಮಾಜದಲ್ಲಿ ಸ್ವಾರ್ಥ, ದ್ವೇಷ ಮನೋಭಾವನೆ ಹೆಚ್ಚಾಗುತ್ತಿದೆ. ಇಂಥ ಧಾರ್ಮಿಕ ಆಚರಣೆಗಳ ಮೂಲಕ ಉತ್ತಮ ಗುಣಗಳನ್ನು ಬೆಳೆಸಿಕೊಂಡು ಮಾದರಿ ಜೀವನ ನಡೆಸಬೇಕು’ ಎಂದು ಹೈಕೋರ್ಟ್ ನ್ಯಾಯಮೂರ್ತಿ ರಾಮಚಂದ್ರ ಡಿ. ಹುದ್ದಾರ ತಿಳಿಸಿದರು.<br><br> ಶ್ರೀರಾಮ ಸೇವಾ ಮಂಡಳಿ ರಾಮನವಮಿ ಸೆಲಬ್ರೇಷನ್ ಟ್ರಸ್ಟ್ ನಗರದ ಕೋಟೆ ಪ್ರೌಢಶಾಲೆ ಆವರಣದಲ್ಲಿ ಹಮ್ಮಿಕೊಂಡಿರುವ '87ನೇ ಶ್ರೀ ರಾಮನವಮಿ ಸಂಗೀತೋತ್ಸವ ಉದ್ಘಾಟನೆ ಮತ್ತು 'ಎಸ್.ಎಂ.ಕೃಷ್ಣ ಸ್ಮಾರಕ ರಾಷ್ಟ್ರೀಯ ಸಂಗೀತ ಪ್ರಶಸ್ತಿ' ಪ್ರದಾನ ಸಮಾರಂಭದಲ್ಲಿ ಅವರು ಮಾತನಾಡಿದರು.</p>.<p>‘ಧರ್ಮ ಇದ್ದ ಕಡೆ ನ್ಯಾಯ ಇರುತ್ತದೆ. ಧರ್ಮದಲ್ಲಿ ಅಧರ್ಮ ಕೂಡಿದರೆ ಸಮಾಜ ಹಾಳಾಗುತ್ತದೆ. ಪ್ರತಿಯೊಬ್ಬ ಮನುಷ್ಯ ಆದರ್ಶವಾಗುವ ಮೂಲಕ ಸಮಾಜದ ಸುಧಾರಣೆಗೆ ತಮ್ಮ ಜೀವನವನ್ನು ಮುಡುಪಾಗಿ ಇಡಬೇಕು’ ಎಂದು ಸಲಹೆ ನೀಡಿದರು.</p>.<p>‘ರಾಮನ ಆದರ್ಶವನ್ನು ನಾವೆಲ್ಲರೂ ಪಾಲಿಸಿದರೆ ಸಮಾಜ ಸುಧಾರಣೆ ಮಾಡಬಹುದು. ಒಳ್ಳೆಯ ಗುಣಗಳನ್ನು ಅಳವಡಿಸಿಕೊಂಡು ಮಾದರಿ ಜೀವನ ನಡೆಸಬೇಕು’ ಎಂದರು.<br /><br /> ಮಾಜಿ ಮುಖ್ಯಮಂತ್ರಿ ಎಸ್. ಎಂ.ಕೃಷ್ಣ ಅವರ ಪತ್ನಿ ಪ್ರೇಮಾ ಕೃಷ್ಣ ಮಾತನಾಡಿ, ‘ಕೃಷ್ಣ ಅವರಿಗೆ ಸಂಗೀತ ಎಂದರೆ ತುಂಬಾ ಇಷ್ಟ. ಪ್ರತಿ ವರ್ಷ ತಪ್ಪದೇ ರಾಮೋತ್ಸವದ ಸಂಗೀತ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುತ್ತಿದ್ದರು’ ಎಂದು ನೆನಪಿಸಿಕೊಂಡರು.</p>.<p>‘ಹಲವು ವರ್ಷಗಳಿಂದ ನಡೆಸಿಕೊಂಡು ಬರುತ್ತಿರುವ ರಾಮಸೇವಾ ಮಂಡಳಿಯ ರಾಮನವಮಿ ಸಂಗೀತೋತ್ಸವ ದೇಶಕ್ಕೆ ಮಾದರಿಯಾಗಿದೆ. ಇಂಥ ಸಂಗೀತೋತ್ಸವದಲ್ಲಿ ಪಾಲ್ಗೊಳ್ಳಲು ಅವಕಾಶ ಮಾಡಿಕೊಟ್ಟ ಆಯೋಜಕರಿಗೆ ಅಭಾರಿಯಾಗಿದ್ದೇನೆ’ ಎಂದರು.</p>.<p>ಕಾರ್ಯಕ್ರಮದಲ್ಲಿ ರಾಮಚಂದ್ರ ಹುದ್ದಾರ ಅವರು ವಿದ್ವಾನ್ ಸಂದೀಪ ನಾರಾಯಣ್ ಅವರಿಗೆ ‘ಎಸ್.ಎಂ.ಕೃಷ್ಣ ಸ್ಮಾರಕ ರಾಷ್ಟ್ರೀಯ ಸಂಗೀತ ಪ್ರಶಸ್ತಿ’ ಪ್ರದಾನ ಮಾಡಿದರು. ಪ್ರಶಸ್ತಿಯು ₹ 1 ಲಕ್ಷ ನಗದು, ಸ್ಮರಣಿಕೆ ಮತ್ತು ಫಲ ತಾಂಬೂಲವನ್ನು ಒಳಗೊಂಡಿದೆ. ಎಸ್.ಎಂ. ಕೃಷ್ಣ ಕುಟುಂಬದವರು ರಾಮಸೇವಾ ಮಂಡಳಿಯಲ್ಲಿ ಈ ಪ್ರಶಸ್ತಿಯನ್ನು ಸ್ಥಾಪಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>