‘ಫೀಡರ್ ಲೈನ್, ನೀರು ಪೂರೈಕೆ ಕೊಳವೆ, ಒಳಚರಂಡಿ ಮಾರ್ಗ, ವಿದ್ಯುತ್ ಕೇಬಲ್ ಎಲ್ಲವನ್ನೂ ಈಗ ನೆಲದ ಆಡಿಯಲ್ಲಿ ಅಳವಡಿಸಲಾಗಿದೆ. ಹಾಗೆಯೇ ಪಾದಚಾರಿ ಮಾರ್ಗವನ್ನೂ ಅಭಿವೃದ್ಧಿ ಪಡಿಸಲಾಗಿದೆ. ಮೂಲಸೌಕರ್ಯ ಅಗತ್ಯಗಳಿಗೆಂದು ಮುಂದಿನ ದಿನಗಳಲ್ಲಿ ರಸ್ತೆ ಅಗೆಯುವ ಅನಿವಾರ್ಯತೆ ಇರುವುದಿಲ್ಲ. ಈ ಭಾಗದಲ್ಲಿ ಆಗುತ್ತಿದ್ದ ನೀರಿನ ಪೋಲನ್ನು ಸಹ ಈಗ ನಿಲ್ಲಿಸಲಾಗಿದೆ’ ಎಂದು ಅವರು ವಿವರಿಸಿದರು.